ಮಂಗಳೂರು, ಅ.18:ಇಲ್ಲಿನ ಶ್ರೀ ಮಂಗಳಾದೇವಿ ದೇವಸ್ಥಾನದ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮೇಲೆ ಕೇಸರಿ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ.
ಅ.16ರಂದು ಶರಣ್ ಪಂಪ್ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದಲ್ಲದೆ ಹಿಂದೂಗಳು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ.
ಈ ಕೃತ್ಯವು ಭಿನ್ನಕೋಮಿನ ನಡುವೆ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಅದರಂತೆ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸೈ ಮನೋಹರ್ ಪ್ರಸಾದ್ ದೂರಿನ ಮೇಲೆ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲು ಮಾಡಿಕೊಂಡು, ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಶರಣ್ ಪಂಪ್ವೆಲ್ ಬಂಧನಕ್ಕೆ ಆಗ್ರಹ
ಇಂದು ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ಸಂಘಟನೆಗಳ ನಿಯೋಗ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ, ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್