ಮಂಗಳೂರು, ಅ.18:ಇಲ್ಲಿನ ಶ್ರೀ ಮಂಗಳಾದೇವಿ ದೇವಸ್ಥಾನದ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮೇಲೆ ಕೇಸರಿ ಧ್ವಜ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ.
ಅ.16ರಂದು ಶರಣ್ ಪಂಪ್ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜವನ್ನು ನೆಟ್ಟಿದ್ದಲ್ಲದೆ ಹಿಂದೂಗಳು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ.
ಈ ಕೃತ್ಯವು ಭಿನ್ನಕೋಮಿನ ನಡುವೆ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಅದರಂತೆ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸೈ ಮನೋಹರ್ ಪ್ರಸಾದ್ ದೂರಿನ ಮೇಲೆ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲು ಮಾಡಿಕೊಂಡು, ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಶರಣ್ ಪಂಪ್ವೆಲ್ ಬಂಧನಕ್ಕೆ ಆಗ್ರಹ
ಇಂದು ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ಸಂಘಟನೆಗಳ ನಿಯೋಗ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ, ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ