ಬಂಟ್ವಾಳ: ಎಸ್ವೈಎಸ್ ನ 30 ನೇ ವರ್ಷಾಚರಣೆಯ ಭಾಗವಾಗಿ ಜಿಲ್ಲಾ ಯುವಜನೋತ್ಸವ ನವೆಂಬರ್ 14 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿರುವ ಯುವಜನೋತ್ಸವದ ಪ್ರಚಾರಾರ್ಥ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾ ಸಮಿತಿ ವ್ಯಾಪ್ತಿಯ 33 ಸರ್ಕಲ್ಗಳಲ್ಲಿ ನಡೆಸಲಾಗುವ ‘ಯೂನಿಟ್ ಹೋಮೋನ್’ ಇದರ ಚಾಲನಾ ಕಾರ್ಯಕ್ರಮವು ಬಂಟ್ವಾಳ ಝೋನ್ ವ್ಯಾಪ್ತಿಯ ಸಜಿಪ ಸರ್ಕಲ್ ಅಧೀನದ ಕೊಳಕೆಯಲ್ಲಿ ನಡೆಯಿತು.

ಸಯ್ಯಿದ್ ಮುಶ್ತಾಕುರ್ರಹ್ಮಾನ್ ಸಅದಿ ತಂಙಳ್ ದುಆಗೈದರು. ಬಂಟ್ವಾಳ ಝೋನ್ ಅಧ್ಯಕ್ಷ ಮಹ್ಮೂದ್ ಸಅದಿ ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲಾಧ್ಯಕ್ಷ ವಿ.ಯು ಇಸ್ಹಾಕ್ ಝುಹ್ರಿ, ಜಿಲ್ಲಾ ನಾಯಕ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು ತರಗತಿ ಮಂಡಿಸಿದರು.

ಈ ಸಂದರ್ಭದಲ್ಲಿ ಅಬ್ದುಲ್ಲಾ ಕೊಳಕೆ, ಇಕ್ಬಾಲ್ ಗೋಳಿಪಡ್ಪು, ಎಸ್.ಕೆ.ಮುಹಮ್ಮದ್ ಕೊಳಕೆ ಮುಂತಾದವರು ಉಪಸ್ಥಿತರಿದ್ದರು.ಸಜಿಪ ಸರ್ಕಲ್ ಕಾರ್ಯದರ್ಶಿ ಅಕ್ಬರಲಿ ಮದನಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.



















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ