ನೆಲ್ಯಾಹುದಿಕೇರಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ವೈಎಸ್) 30ನೇ ವರ್ಷಾಚರಣೆಯ ಪ್ರಯುಕ್ತ ‘ಪರಂಪರೆಯ ಪ್ರತಿನಿಧಿಗಳಾಗೋಣ’ ಎಂಬ ಧ್ಯೇಯ ವಾಕ್ಯದಡಿಯಲ್ಲಿ 2024 ರ ಜನವರಿ 24ರಂದು ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನದ ಪ್ರಚಾರಾರ್ಥ ಕೊಡಗು ಜಿಲ್ಲಾ ಸಮಿತಿ ಆಯೋಜಿಸಿದ ರಾಜ್ಯ ಸಮಿತಿ ನಾಯಕರ ಜ್ಯೂಬಿಲಿ ಜರ್ನಿ ಕಾರ್ಯಕ್ರಮವು ನೆಲ್ಯಾಹುದಿಕೇರಿಯ ದಾರುನ್ನಜಾತ್ ಹಾಗೂ ಕಡಂಗದ ಬದ್ರಿಯ ಮದ್ರಸದಲ್ಲಿ ನಡೆಯಿತು.

30 ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಸಮಾಜ ಸೇವೆ ಸಹಿತ ಹಲವಾರು ಕಾರ್ಯಕ್ರಮಗಳನ್ನು ವಿವಿಧ ಘಟಕಗಳಲ್ಲಿ ಹಮ್ಮಿಕೊಂಡಿದ್ದು, ಅವುಗಳೆಲ್ಲವನ್ನೂ ಕಾರ್ಯರೂಪಕ್ಕೆ ತಂದು ಯಶಸ್ವಿಗೊಳಿಸಿ ಸೇವಾ ಮನೋಭಾವವಿರುವ ಉತ್ತಮ ಕಾರ್ಯಕರ್ತರನ್ನು ಸೃಷ್ಟಿಸುವಂತೆಯೂ ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆಯೂ ಎಸ್ವೈಎಸ್ ರಾಜ್ಯಾಧ್ಯಕ್ಷರಾದ ಹಫೀಳ್ ಸಅದಿ ಕರೆ ನೀಡಿದರು.
ಜಿಲ್ಲಾಧ್ಯಕ್ಷರಾದ ಅಬ್ದುಲ್ ಹಮೀದ್ ಮುಸ್ಲಿಯಾರ್ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಾತನಾಡಿ ಕಾರ್ಯಚಟುವಟಿಕೆಗಳ ರೂಪುರೇಷೆಗಳನ್ನು ವಿವರಿಸಿದರು.

ಕೋಶಾಧಿಕಾರಿ ಅಡ್ವಕೇಟ್ ಹಂಝತ್ ಉಡುಪಿ ,ದಅವಾ ವಿಭಾಗ ಕಾರ್ಯದರ್ಶಿ ಸಯ್ಯಿದ್ ಶಾಫಿ ನಈಮಿ ತಂಙ್ಙಳ್, ಸಾಂತ್ವನ ವಿಭಾಗ ಕಾರ್ಯದರ್ಶಿಯೂ ಕೊಡಗು ಜಿಲ್ಲಾ ಉಸ್ತುವಾರಿಯೂ ಆದಂತಹ ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ, ಮಾಧ್ಯಮ ಕಾರ್ಯದರ್ಶಿ ಹಸೈನಾರ್ ಆನೆಮಹಲ್, ಸಯ್ಯಿದ್ ಇಲ್ಯಾಸ್ ತಂಙ್ಙಳ್, ವಿ ಪಿ ಮೊಯ್ದೀನ್, ಅಬ್ದುಲ್ಲ, ಆಸಿಫ್ ಸೇರಿದಂತೆ ಇನ್ನಿತರ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಕಾರ್ಯದರ್ಶಿ ಅಹಮದ್ ಮದನಿ ಸ್ವಾಗತಿಸಿ ಕೃತಜ್ಞತೆ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ