ಕೊಚ್ಚಿ: ಕಳಮಶ್ಶೇರಿಯಲ್ಲಿ ನಡೆದ ಸ್ಫೋಟದ ತನಿಖೆಯು ಬಿರುಸಿನಿಂದ ಸಾಗುತ್ತಿರುವಾಗಲೇ ಬಾಂಬ್ ಇಟ್ಟಿದ್ದು ನಾನೇ ಎಂದು ವ್ಯಕ್ತಿಯೊಬ್ಬ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ವರದಿಯಾಗಿದೆ.
ಕೊಚ್ಚಿ ಮೂಲದವನೆಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ತ್ರಿಶೂರ್ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಮಧ್ಯಾಹ್ನ ಒಂದೂವರೆ ಗಂಟೆಗೆ ಪೊಲೀಸ್ ಠಾಣೆ ತಲುಪಿದ ಆತನನ್ನು ಪೋಲೀಸರು ಕೂಲಂಕಷವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಆತನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಬಿಡುಗಡೆ ಮಾಡಿಲ್ಲ.
ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ನೆಲೆಯಲ್ಲಿ ಗುಜರಾತ್ ಮೂಲದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆಯಲಾಗಿದೆ.ಆತನ ಬಗ್ಗೆ ಹೆಚ್ಚಿನ ಮಾಹಿತಿ ಹೊರಬಿದ್ದಿಲ್ಲ. ಈತನಿಗೆ ಮಾನಸಿಕ ಸಮಸ್ಯೆ ಇದೆಯೇ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.
ಸ್ಪೋಟ ನಡೆದ ತಕ್ಷಣವೇ ಸ್ಥಳದಿಂದ ನಿರ್ಗಮಿಸಿದ ನೀಲಿ ಕಾರನ್ನು ಕೇಂದ್ರೀಕೃರಿಸಿಯೂ ತನಿಖೆ ನಡೆಯುತ್ತಿದೆ.
ಕಳಮಶ್ಶೇರಿಯಲ್ಲಿ ಯೆಹೋವನ ಅಧಿವೇಶನ ನಡೆಯುತ್ತಿದ್ದ ಕನ್ವೆನ್ಷನ್ ಸೆಂಟರ್ನಲ್ಲಿ ಬೆಳಗ್ಗೆ 9.45ರ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ