ಬೆಂಗಳೂರು: ನಗರದ ಲುಲು ಮಾಲ್ನಲ್ಲಿ ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋ ಇತ್ತೀಚೆಗಷ್ಟೇ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಇದೀಗ ವೀಡಿಯೊ ದೃಶ್ಯ ಆಧರಿಸಿ ಆರೋಪಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) ಆರೋಪಿ. ಮೂರು ದಿನಗಳ ಹಿಂದೆ ಲುಲು ಮಾಲ್ ನಲ್ಲಿ ಯವತಿಯರ ಜೊತೆ ಅಸಭ್ಯವಾಗಿ ಅಶ್ವಥ್ ನಾರಾಯಣ್ ವರ್ತಿಸಿದ್ದ. ಈ ವೇಳೆ ಯುವಕ ಯಶವಂತ್ ವೀಡಿಯೊ ಚಿತ್ರೀಕರಿಸಿದ್ದ.
ವೀಡಿಯೊ ವೈರಲ್ ಬಳಿಕ ಲುಲು ಮ್ಯಾನೇಜರ್ ಕೇಸ್ ದಾಖಲಿಸಿದ್ರು. ವೀಡಿಯೊ ಆಧರಿಸಿ ಸದ್ಯ ಆರೋಪಿಯ ಗುರುತನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿ ಪ್ರತಿಷ್ಠಿತ ಮಠಕ್ಕೆ ಸೇರಿದ ಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಿವೃತ್ತನಾಗಿದ್ದ. ಕಳೆದ ಎಂಟು ತಿಂಗಳ ಹಿಂದೆ ಅಶ್ವಥ್ ನಾರಾಯಣ್ ನಿವೃತ್ತನಾಗಿದ್ದ. ಸದ್ಯ ಅಶ್ವಥ್ ನಾರಾಯಣ್ ಮನೆಗೆ ಬೀಗ ಹಾಕಿಕೊಂಡು ಎಸ್ಕೇಪ್ ಆಗಿದ್ದು, ಆತನ ಪತ್ತೆಗೆ ಮಾಗಡಿ ರೋಡ್ ಪೊಲೀಸ್ರು ಹುಡುಕಾಟ ಮುಂದುವರೆಸಿದ್ದಾರೆ.
ಘಟನೆ?:
ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ. ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಮಹಿಳೆಯ ಹಿಂಬದಿಯಲ್ಲಿ ಆಕೆಯನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ. ಬಳಿಕ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಪರಾರಿಯಾಗಿದ್ದಾನೆ. ಈ ವಿಡಿಯೋ ಗ್ರಾಹಕರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದ್ದು, yesh_fitspiration ಎನ್ನುವ ಇನ್ಸ್ಟಾಗ್ರಾಮ್ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿತ್ತು. ಲುಲು ಮಾಲ್ ಅಧಿಕಾರಿ ಇದೀಗ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಮಾಗಡಿ ರಸ್ತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಡಿಯೋ ಆಧಾರದ ಮೇಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ