ವಿಟ್ಲ: ಇಲ್ಲಿನ ಸರ್ಕಾರಿ ಸಮುದಾಯ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ ಸಾಂಕೇತಿಕ ಪ್ರತಿಭಟನೆಯನ್ನು ದಕ್ಷಿಣ ಕನ್ನಡ ದಲಿತ್ ಸೇವಾ ಸಮಿತಿ ರೈತ ಸಂಘ, ಖಿದ್ಮತ್ ಫೌಂಡೇಶನ್ ವಿಟ್ಲ ವಲಯ ಇವುಗಳ ಜಂಟಿ ಆಶ್ರಯದಲ್ಲಿ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಂಘ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು, ರೈತ ಸಂಘ ನಾಯಕರಾದ ರಾಮಣ್ಣ, ವಿಟ್ಲ ಖ್ಗದ್ಮತ್ ಫೌಂಡೇಶನ್ ಅಧ್ಯಕ್ಷರಾದ ಹಾಜಿ ಹಬ್ದುಲ್ ಹಮೀದ್ ಕೊಡಂಗಾಯಿ ಮಾತನಾಡಿ ಆಸ್ಪತ್ರೆಯ ವ್ಯವಸ್ಥೆಗಳು ಮುಂದಿನ ದಿನಗಳಲ್ಲಿ ಸರಿಪಡಿಸದಿದ್ದಲ್ಲಿ ಈ ಹೋರಾಟ ದೊಡ್ಡಮಟ್ಟದಲ್ಲಿ ಮುಂದರಿಯುತ್ತದೆ ಎಂದರು.
ಜನಪ್ರತಿನಿಧಿಗಳು, ಬಡವರ ಪಾಲಿಗೆ ಆಸರೆಯಾಗಿರುವ ವಿಟ್ಲ ಸರ್ಕಾರಿ ಆಸ್ಪತ್ರೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಶೀಘ್ರ ವ್ಯವಸ್ಥೆ ಸರಿಪಡಿಸಬೇಕು. ಸರ್ಜನ್ ವೈಧ್ಯರು ಎಕ್ಸೆರೆ, ಸ್ಕ್ಯಾನಿಂಗ್, ಡಯಾಲಿಸ್ ಸೆಂಟರ್ ಹಾಗೂ ಗರ್ಭಿಣಿಯರಿಗೆ ಸಿಸೇರಿಯನ್ ವ್ಯವಸ್ಥೆ ಮಾಡಬೇಕು. ರಾತ್ರಿ ವೇಳೆಯಲ್ಲಿ ಸೂಕ್ತ ಚಿಕಿತ್ಸೆಗಾಗಿ ವೈಧ್ಯಯರ ಸೇವೆ ಒದಗಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿ ಭೇಟಿ ನೀಡುವ ತನಕ ಪ್ರತಿಭಟನೆ ಮುಂದುವರಿಸುವುದಾಗಿ ಎಚ್ಚರಿಸಲಾಯಿತು.
ಇದೇ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಭೇಟಿ ನೀಡಿ ವ್ಯವಸ್ಥೆ ಸರಿಪಡಿಸುವ ಭರವಸೆ ನೀಡಿದ ಕಾರಣದಿಂದ ಧರಣಿಯನ್ನು ತಾತ್ಕಾಲಿಕ ಹಿಂಪಡೆಯಲಾಯಿತು.
ಶೀಘ್ರದಲ್ಲೇ ಸಮಸ್ಯೆ ಬಗೆಹರಿಯದಿದ್ದಲ್ಲಿ ವಿಟ್ಲ ಪರಿಸರದ ಎಲ್ಲಾ ಸಂಘಟನೆಗಳು ಜೊತೆ ಸೇರಿ ಮತ್ತೆ ಹೋರಾಟ ಮುಂದುವರಿಸುವುದಾಗಿ
ನಾಯಕರು ತಿಳಿಸಿದರು. ಈ ಸಂದರ್ಭದಲ್ಲಿ ದಲಿತ್ ಸಮಿತಿ ಜಿಲ್ಲಾಧ್ಯಕ್ಷರು ದಲಿತ್ ಸೇವಾ ಸಮಿತಿಯ ನಾಯಕರು ಖಿದ್ಮತ್ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಸಲೀಂ ಹಾಜಿ ಹಾಗೂ ಖಿದ್ಮತ್ ಫೌಂಡೇಶನ್ ಸಮಿತಿಯ ನಾಯಕರು ಉಪಸ್ಥಿತರಿದ್ದರು ಚಂದ್ರಶೇಖರ್ ಯು ಸ್ವಾಗತಿಸಿದರು.

















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?