ಇಸ್ಲಾಂ ಧರ್ಮವು ಮನುಕುಲದ ಒಳಿತಿಗಾಗಿ ಸೃಷ್ಟಿ ಕರ್ತನೇ ರೂಪಿಸಿದ ನೀತಿ ಸಂಹಿತೆಗಳಾಗಿದ್ದು ಪ್ರವಾದಿಗಳಿಂದ ಸಹಾಬತ್ ಮತ್ತು ಅವರ ನಂತರದ ಸಜ್ಜನರ ಮೂಲಕ ನಮ್ಮನ್ನು ತಲುಪಿದೆ. ಪೂರ್ವಿಕರಿಂದ ಪರಂಪರಾಗತವಾಗಿ ಬಂದ ಧಾರ್ಮಿಕ ಆಚಾರ ವಿಚಾರಗಳನ್ನು ಯಥಾವತ್ತಾಗಿ ಪಾಲಿಸುವುದೇ ನಿಜವಾದ ಧರ್ಮ. ಅದನ್ನೇ ಅಹ್ಲ್ ಸುನ್ನತಿ ವಲ್ ಜಮಅ: ಎನ್ನಲಾಗುತ್ತದೆ. ಎಂದು ಐಸಿಎಫ್ ಬಹರೈನ್ ದಅವಾ ವಿಂಗ್ ಅಧ್ಯಕ್ಷರಾದ ಬಹು. ಅಬೂಬಕರ್ ಲತೀಫಿ ಉಸ್ತಾದ್ ಹೇಳಿದರು.
ಅವರು ಕೆಸಿಎಫ್ ಹಾಮದ್ ಟೌನ್ ಸೆಕ್ಟರಿನ ವತಿಯಿಂದ ನಡೆದ ಸಂಘಟನಾ ತರಬೇತಿಗೆ ನಾಯಕತ್ವ ನೀಡಿ ಮಾತನಾಡಿದರು.
ಸುನ್ನೀ ಸಿದ್ಧಾಂತಗಳಿಗೆ ವಿರುದ್ಧವಾಗಿ ಸೃಷ್ಟಿಸಲಾದ ಕೃತಕ ಪಂತಗಳು ಅತ್ಯಂತ ಅಪಾಯಕಾರಿಯಾಗಿದ್ದು ಸುನ್ನಿಗಳು ಸಂಘಟಿತರಾಗಿ ಜನ ಸಾಮಾನ್ಯರಿಗೆ ನೈಜ ಆಚಾರ ವಿಚಾರಗಳನ್ನು ತಲುಪಿಸಲು ಪ್ರಯತ್ನಿಸಬೇಕೆಂದು ಅವರು ಕರೆ ನೀಡಿದರು.
ಜನರಿಗೆ ಧರ್ಮ ಬೋಧನೆ ನೀಡುವುದರ ಜತೆಗೆ ಕಷ್ಟದಲ್ಲಿರುವ ಜನರಿಗೆ ಸಹಾಯ ಸಹಕಾರವನ್ನು ನೀಡಿ ಸಾಂತ್ವನ ಕಾರ್ಯಾಚರಣೆಯಲ್ಲಿ ಸಹಾ ಮುಂದಾಗುತ್ತಿರುವ ಕೆಸಿಎಫ್ ಕನ್ನಡಿಗರ ಪಾಲಿಗೆ ಬಹುದೊಡ್ಡ ಭಾಗ್ಯವಾಗಿದ್ದು ಇದನ್ನು ಮತ್ತಷ್ಟು ಪ್ರಬಲಗೊಳಿಸಿ ಬೆಳೆಸಬೇಕೆಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕೆಸಿಎಫ್ ಹಾಮದ್ ಟೌನ್ ಸೆಕ್ಟರ್ ಅಧ್ಯಕ್ಷರಾದ ಜನಾಬ್ ನಯಾಝ್ ಬಟ್ಕಲ್ ರವರ ಅಧ್ಯಕ್ಷತೆಯಲ್ಲಿ ನಡೆದ ಸ್ವಲಾತ್ ಮಜ್ಲಿಸಿಗೆ ಸಂಘಟನಾ ವಿಭಾಗದ ಅಧ್ಯಕ್ಷರಾದ ಖಲಂದರ್ ಉಸ್ತಾದ್ ನೇತೃತ್ವ ನೀಡಿದರು.
ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಬೆಳ್ಮ ಸ್ವಾಗತಿಸಿದರು. ಸೆಕ್ಟರ್ ಕಾರ್ಯದರ್ಶಿ ಸುಫೈದ್ ಕೃಷ್ಣಾಪುರ ಧನ್ಯವಾದ ಅರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?