ಕಾಜೂರು: ಕಾಜೂರು ದರ್ಗಾ ಸಮಿತಿ ಅಧೀನದ ವಿದ್ಯಾ ಸಂಸ್ಥೆಗಳಾದ ರಾಹ ಪಬ್ಲಿಕ್ ಸ್ಕೂಲ್, ಹೈಸ್ಕೂಲ್, ಪಿಯುಸಿ ಮತ್ತು ಶರೀಅತ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರಖ್ಯಾತ ತರಬೇತುದಾರರಾದ ರಫೀಕ್ ಮಾಸ್ಟರ್ ರವರಿಂದ ವಿಶೇಷ ತರಬೇತಿ ಕಾರ್ಯಾಗಾರ 15.11.2023ರಂದು ಕಾಜೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಯು. ಇಬ್ರಾಹಿಂ ರವರ ಅಧ್ಯಕ್ಷತೆಯಲ್ಲಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯಿತು.


ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಉದ್ಘಾಟಿಸಿದರು. ಸಂಸ್ಥೆಯಲ್ಲಿ 2022-23 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ನಿಶಾ ಹಾಗೂ ಮುಹಮ್ಮದ್ ಸುಹೈಬ್, ಪಿಯುಸಿಯಲ್ಲಿ ಖತೀಜಾ ಬರೀರಾ ಹಾಗೂ ಫೌಝಿಯಾರವರನ್ನು ಸನ್ಮಾನಿಸಲಾಯಿತು.
ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ದರ್ಗಾ ಸಮಿತಿ ಉಪಾಧ್ಯಕ್ಷರಾದ ಬದ್ರುದ್ದೀನ್, ಶಿಕ್ಷಣ ಸಂಸ್ಥೆಯ ಚೇರ್ಮೆನ್, ದರ್ಗಾ ಪ್ರದಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಶಿಕ್ಷಣ ಸಂಸ್ಥೆಯ ಪ್ರತಿನಿಧಿಗಳಾದ ಆಸಿಫ್, ಶರೀಫ್ ಹೈಟೆಕ್, ಮುಸ್ತಫ ಡಿ ಎಚ್, ನವಾಝ್ ಎನ್.ಎಂ ಮತ್ತು ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸಂಶಾದ್.ಎ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಮದ್ರಸ ಸದರ್ ಉಸ್ತಾದ್ ಜಮಾಲ್ ಲತೀಫಿ ದುಆ ನೆರವೇರಿಸಿದರು. ಸಂಸ್ಥೆಯ ಅಧ್ಯಾಪಕರಾದ ಸ್ವಾದಿಕ್ ಮಾಸ್ಟರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶರೀಅತ್ ಕಾಲೇಜು ಉಪ ಪ್ರಾಂಶುಪಾಲರಾದ ಅಬ್ದುರ್ರಹ್ಮಾನ್ ಸಅದಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ