ಮಸ್ಕತ್ : ಮಸ್ಕತ್ ನಿಂದ ಮುಂಬೈಗೆ ತೆರಳುತ್ತಿದ್ದ ವಿಮಾನದಲ್ಲಿ ಯುವಕನೊಬ್ಬ ಧೂಮಪಾನ ಮಾಡಿದ್ದು, ಸಿಕ್ಕಿಬಿದ್ದಿದ್ದಾನೆ. ಬೆಂಗಳೂರು ಮೂಲದ 27 ವರ್ಷದ ಕಬೀರ್ ಸೈಫ್ ರಿಝ್ವಿ ಎಂಬಾತನನ್ನು ಸಹರ್ ಪೊಲೀಸರು ಬಂಧಿಸಿದ್ದಾರೆ. ಮಸ್ಕತ್ ನಿಂದ ಮುಂಬೈಗೆ ತೆರಳುತ್ತಿದ್ದ ಓಮಾನ್ ಏರ್ ವಿಮಾನದಲ್ಲಿ ಈ ಘಟನೆ ನಡೆದಿದೆ.
ಬಂಧಿತ ಯುವಕ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ್ದಾನೆ. ಶೌಚಾಲಯದಿಂದ ಹೊರ ಬಂದ ಕೂಡಲೇ ವಿಮಾನ ಸಿಬ್ಬಂದಿ ಯುವಕನನ್ನು ಹಿಡಿದು ಸಹರ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನಿಂದ ಲೈಟರ್, ಸಿಗರೇಟ್ ಪ್ಯಾಕೆಟ್ ಹಾಗೂ ಹಾನಿಗೊಳಗಾದ ಆಮ್ಲಜನಕ ಕಿಟ್ ವಶಪಡಿಸಿಕೊಳ್ಳಲಾಗಿದೆ. ಆತನನ್ನು ಐಪಿಸಿ ಸೆಕ್ಷನ್ 336ರ ಅಡಿಯಲ್ಲಿ ಬಂಧಿಸಲಾಗಿದೆ.ಇದು ಇತರರ ಜೀವಕ್ಕೆ ಅಪಾಯವನ್ನುಂಟುಮಾಡಲು ಯತ್ನಿಸಿರುವ ಅಪರಾಧವಾಗಿದೆ .
ಈ ವರ್ಷ ಇಲ್ಲಿಯವರೆಗೆ, ಧೂಮಪಾನಕ್ಕೆ ಸಂಬಂಧಿಸಿದ 13 ಪ್ರಕರಣಗಳು ದಾಖಲಾಗಿವೆ. ಈ ವರ್ಷದ ಜುಲೈನಲ್ಲಿ ಜಿದ್ದಾ-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸಿಕ್ಕಿಬಿದ್ದಿದ್ದರು. ವಿಮಾನದಲ್ಲಿ ಧೂಮಪಾನ ಮಾಡುವುದು ಸಹ ಪ್ರಯಾಣಿಕರ ಜೀವಕ್ಕೆ ಅಪಾಯ ಹಾಗೂ ವಿಮಾನಕ್ಕೆ ಬೆಂಕಿ ಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ ಎಂಬ ಕಾರಣಕ್ಕೆ ಕಠಿಣ ನಿಯಂತ್ರಣ ಏರ್ಪಡಿಸಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್