ನವದೆಹಲಿ: ಭಾರತ ಸಂದರ್ಶನದಲ್ಲಿರುವ ಸೌದಿ ಅರೇಬಿಯಾದ ಹಜ್ ಸಚಿವರಾದ ತೌಫೀಖ್ ಬಿನ್ ಫೌಝಾನ್ ಅಲ್ ರಬೀಅ, ಹಜ್ ಉಮ್ರಾ ಯಾತ್ರಾರ್ಥಿಗಳಿಗೆ ವೀಸಾ ಪ್ರಕ್ರಿಯೆಗಳನ್ನು ಸರಾಗಗೊಳಿಸಲಾಗುವುದು ಎಂದು ಘೋಷಿಸಿದರು. ಇದೇ ವೇಳೆ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಜೊತೆಗಿದ್ದರು.
ಉಮ್ರಾ ಯಾತ್ರಿಕರ ಸುಗಮ ಪ್ರಯಾಣಕ್ಕಾಗಿ ಭಾರತ ಮತ್ತು ಸೌದಿ ಅರೇಬಿಯಾ ನಡುವೆ ಹೆಚ್ಚಿನ ನೇರ ವಿಮಾನಗಳನ್ನು ಪ್ರಾರಂಭಿಸಲಾಗುವುದು ಎಂದು ಸೌದಿ ಹಜ್ ಸಚಿವರು ಹೇಳಿದರು. ಕಡಿಮೆ ವೆಚ್ಚದ ವಿಮಾನಗಳ ಸೇವೆ ಆರಂಭಿಸುವ ಬಗ್ಗೆಯೂ ಪರಿಗಣನೆಯಲ್ಲಿದೆ ಎಂದು ಅವರು ಹೇಳಿದರು.
ಭಾರತದಲ್ಲಿ ಹಜ್ ಯಾತ್ರಿಕರಿಗೆ ಸೌದಿ ಅರೇಬಿಯಾ ನೀಡಿದ ಬೆಂಬಲಕ್ಕೆ ಸ್ಮೃತಿ ಇರಾನಿ ಕೃತಜ್ಞತೆ ಸಲ್ಲಿಸಿದರು. ಸೌದಿ ಹಜ್ ಮತ್ತು ಉಮ್ರಾ ಸಚಿವ ತೌಫೀಖ್ ಅಲ್ ರಬೀಅ ಅವರು ಅಧಿಕೃತ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಎರಡು ದೇಶಗಳ ನಡುವಿನ ಪರಸ್ಪರ ಸಹಕಾರವನ್ನು ಬಲಪಡಿಸುವುದು ಮತ್ತು ಉಮ್ರಾ ಯಾತ್ರೆಗೆ ಅಂತರಾಷ್ಟ್ರೀಯ ಯಾತ್ರಿಕರ ಪ್ರಯಾಣವನ್ನು ಸುಗಮಗೊಳಿಸುವುದು ಭೇಟಿಯ ಉದ್ದೇಶವಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್