ಬೆಂಗಳೂರು: ಪಾಸ್ಪೋರ್ಟ್ ನವೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಕ್ರಿಮಿನಲ್ ಕೇಸ್ ಬಾಕಿ ಇದ್ದರೆ ಪಾಸ್ಪೋರ್ಟ್ ನವೀಕರಣ ಸಾಧ್ಯವಿಲ್ಲ ಎಂದಿದೆ. ತಾಯಿಯ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ ತುಮಕೂರಿನ ವ್ಯಕ್ತಿಯ ಪಾಸ್ಪೋರ್ಟ್ ನವೀಕರಣಕ್ಕೆ ಅವಕಾಶ ನೀಡಲಾಗದು ಎಂದು ಕೋರ್ಟ್ ಆದೇಶಿಸಿದೆ.
ಪಾಸ್ಪೋರ್ಟ್ ನವೀಕರಣವನ್ನು ನಿರಾಕರಿಸಿ, ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿ ನೀಡಿದ್ದ ಹಿಂಬರಹವನ್ನು ಕೋರ್ಟ್ ಆದೇಶದಲ್ಲಿ ಎತ್ತಿಹಿಡಿದಿದೆ. ಸೆಷನ್ಸ್ ಕೋರ್ಟ್ ಮುಂದೆ ಕ್ರಿಮಿನಲ್ ಪ್ರಕರಣ ಬಾಕಿ ಇರುವ ಸಂತೋಷ್ ಬೀಜಾಡಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
“ಪಾಸ್ಪೋರ್ಟ್ ಕಾಯಿದೆಯ ಯಾವುದೇ ನಿಯಮಗಳಲ್ಲಿ ಪಾಸ್ಪೋರ್ಟ್ ವಿತರಣೆ/ ನವೀಕರಣಕ್ಕೆ ಬಾಕಿ ಇರುವ ಕ್ರಿಮಿನಲ್ ಕೇಸ್ ಅನ್ನು ಅಲಕ್ಷಿಸುವ ಯಾವುದೇ ಪ್ರತ್ಯೇಕ ಮಾನದಂಡವಿಲ್ಲ”. ಈ ಹಿಂದೆ ಹೈಕೋರ್ಟ್ನ ಮೂರು ಪ್ರತ್ಯೇಕ ಏಕಸದಸ್ಯಪೀಠಗಳು, ಕ್ರಿಮಿನಲ್ ಪ್ರಕರಣ ಬಾಕಿ ಇರುವುದು ಪಾಸ್ಪೋರ್ಟ್ ನವೀಕರಣಕ್ಕೆ ಅಡ್ಡಿಯಲ್ಲ ಎಂದು ಆದೇಶಿಸಿದ್ದವು. ಆದರೆ ಇದೀಗ ಕೋರ್ಟ್ ಕ್ರಿಮಿನಲ್ ಕೇಸ್ ಇರುವುದು ಅಡ್ಡಿ ಎಂದು ಹೇಳುವ ಮೂಲಕ ಭಿನ್ನವಾದ ತೀರ್ಪು ನೀಡಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್