ಬೆಂಗಳೂರು: ಪಾಸ್ಪೋರ್ಟ್ ನವೀಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದು, ಕ್ರಿಮಿನಲ್ ಕೇಸ್ ಬಾಕಿ ಇದ್ದರೆ ಪಾಸ್ಪೋರ್ಟ್ ನವೀಕರಣ ಸಾಧ್ಯವಿಲ್ಲ ಎಂದಿದೆ. ತಾಯಿಯ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ ತುಮಕೂರಿನ ವ್ಯಕ್ತಿಯ ಪಾಸ್ಪೋರ್ಟ್ ನವೀಕರಣಕ್ಕೆ ಅವಕಾಶ ನೀಡಲಾಗದು ಎಂದು ಕೋರ್ಟ್ ಆದೇಶಿಸಿದೆ.
ಪಾಸ್ಪೋರ್ಟ್ ನವೀಕರಣವನ್ನು ನಿರಾಕರಿಸಿ, ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿ ನೀಡಿದ್ದ ಹಿಂಬರಹವನ್ನು ಕೋರ್ಟ್ ಆದೇಶದಲ್ಲಿ ಎತ್ತಿಹಿಡಿದಿದೆ. ಸೆಷನ್ಸ್ ಕೋರ್ಟ್ ಮುಂದೆ ಕ್ರಿಮಿನಲ್ ಪ್ರಕರಣ ಬಾಕಿ ಇರುವ ಸಂತೋಷ್ ಬೀಜಾಡಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
“ಪಾಸ್ಪೋರ್ಟ್ ಕಾಯಿದೆಯ ಯಾವುದೇ ನಿಯಮಗಳಲ್ಲಿ ಪಾಸ್ಪೋರ್ಟ್ ವಿತರಣೆ/ ನವೀಕರಣಕ್ಕೆ ಬಾಕಿ ಇರುವ ಕ್ರಿಮಿನಲ್ ಕೇಸ್ ಅನ್ನು ಅಲಕ್ಷಿಸುವ ಯಾವುದೇ ಪ್ರತ್ಯೇಕ ಮಾನದಂಡವಿಲ್ಲ”. ಈ ಹಿಂದೆ ಹೈಕೋರ್ಟ್ನ ಮೂರು ಪ್ರತ್ಯೇಕ ಏಕಸದಸ್ಯಪೀಠಗಳು, ಕ್ರಿಮಿನಲ್ ಪ್ರಕರಣ ಬಾಕಿ ಇರುವುದು ಪಾಸ್ಪೋರ್ಟ್ ನವೀಕರಣಕ್ಕೆ ಅಡ್ಡಿಯಲ್ಲ ಎಂದು ಆದೇಶಿಸಿದ್ದವು. ಆದರೆ ಇದೀಗ ಕೋರ್ಟ್ ಕ್ರಿಮಿನಲ್ ಕೇಸ್ ಇರುವುದು ಅಡ್ಡಿ ಎಂದು ಹೇಳುವ ಮೂಲಕ ಭಿನ್ನವಾದ ತೀರ್ಪು ನೀಡಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ