ಬೆಂಗಳೂರು: ಮುಸ್ಲಿಂ ವಿದ್ವಾಂಸರ ಬಗ್ಗೆ ಸುಳ್ಳು ಆರೋಪ ಹೊರಿಸಿ ಸಮಾಜದಲ್ಲಿ ಅಶಾಂತಿಗೆ ಪ್ರಯತ್ನಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಲ್ ರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹಿಸಿದೆ.
ಡಿಸೆಂಬರ್ 4 ರಂದು ಹುಬ್ಬಳ್ಳಿ ತಾಲೂಕಿನ ಪಾಳೆ ಗ್ರಾಮದಲ್ಲಿ ಮುಖ್ಯಮಂತ್ರಿಗಳು ಪಾಳ್ಗೊಂಡಿದ್ದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಐಸಿಸ್ ಬೆಂಬಲಿತ ವ್ಯಕ್ತಿಗಳು ಪಾಳ್ಗೊಂಡಿದ್ದರೆಂಬ ಯತ್ನಾಳರ ಆರೋಪ ಸತ್ಯಕ್ಕೆ ದೂರವಾಗಿದ್ದು ಕಪೋಕಲ್ಪಿತ ಹೇಳಿಕೆಯೆಂದು ಮುಸ್ಲಿಂ ಜಮಾಅತ್ ತಿಳಿಸಿದೆ. ಯತ್ನಾಳರು ತಮ್ಮ ಆರೋಪವನ್ನು ಕೂಡಲೇ ಸಾಬೀತುಗೊಳಿಸಬೇಕು ಅದಿಲ್ಲದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದೂ ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹಿಸಿದೆ.
ಯತ್ನಾಳರು ಆರೋಪ ಮಾಡಿರುವ ಸಮಾರಂಭದ ವೇದಿಕೆಯಲ್ಲಿದ್ದ ಎಲ್ಲರ ವಿವರ ಪೋಲೀಸ್, ಗುಪ್ತಚರ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ತಿಳಿದಿದ್ದರೂ ಅವರು ಯಾರಿಗೂ ತಿಳಿಯದ ವಿವರ ಯತ್ನಾಳರಿಗೆ ತಿಳಿದದ್ದು ವಿಪರ್ಯಾಸವೇ ಸರಿ, ಯತ್ನಾಳರು ಈ ಹಿಂದೆಯೂ ಮುಸ್ಲಿಮರ ಬಗ್ಗೆ ಇಲ್ಲಸಲ್ಲದ ಆರೋಪ ಹೊರಿಸುತ್ತಲೇ ಬಂದಿದ್ದಾರೆ, ಸಮಾಜದಲ್ಲಿ ಕೋಮು ವೈಷಮ್ಯ ಸೃಷ್ಟಿಸಲು ಯತ್ನಿಸುತ್ತಿರುವ ಇಂತಹ ಸಮಾಜಫಾತಕ ಶಕ್ತಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಜಮಾಅತ್ ಒತ್ತಾಯಿಸಿದೆ.
ಈ ಬಗ್ಗೆ ರಾಜ್ಯದ ರಾಜ್ಯಪಾಲರಿಗೆ ಮುಖ್ಯಮಂತ್ರಿ, ಗ್ರಹಮಂತ್ರಿ ಮತ್ತು ವಿಧಾನ ಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಕರ್ನಾಟಕ ಮುಸ್ಲಿಂ ಜಮಾಅತ್ ಶಾಸಕರ ವಿರುಧ್ಧ ಸೂಕ್ತ ಕ್ರಮಕ್ಕಾಗಿ ಮನವಿ ನೀಡಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ