ಬೆಂಗಳೂರು: ಮುಸ್ಲಿಂ ವಿದ್ವಾಂಸರ ಬಗ್ಗೆ ಸುಳ್ಳು ಆರೋಪ ಹೊರಿಸಿ ಸಮಾಜದಲ್ಲಿ ಅಶಾಂತಿಗೆ ಪ್ರಯತ್ನಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಲ್ ರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹಿಸಿದೆ.
ಡಿಸೆಂಬರ್ 4 ರಂದು ಹುಬ್ಬಳ್ಳಿ ತಾಲೂಕಿನ ಪಾಳೆ ಗ್ರಾಮದಲ್ಲಿ ಮುಖ್ಯಮಂತ್ರಿಗಳು ಪಾಳ್ಗೊಂಡಿದ್ದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಐಸಿಸ್ ಬೆಂಬಲಿತ ವ್ಯಕ್ತಿಗಳು ಪಾಳ್ಗೊಂಡಿದ್ದರೆಂಬ ಯತ್ನಾಳರ ಆರೋಪ ಸತ್ಯಕ್ಕೆ ದೂರವಾಗಿದ್ದು ಕಪೋಕಲ್ಪಿತ ಹೇಳಿಕೆಯೆಂದು ಮುಸ್ಲಿಂ ಜಮಾಅತ್ ತಿಳಿಸಿದೆ. ಯತ್ನಾಳರು ತಮ್ಮ ಆರೋಪವನ್ನು ಕೂಡಲೇ ಸಾಬೀತುಗೊಳಿಸಬೇಕು ಅದಿಲ್ಲದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದೂ ಕರ್ನಾಟಕ ಮುಸ್ಲಿಂ ಜಮಾಅತ್ ಆಗ್ರಹಿಸಿದೆ.
ಯತ್ನಾಳರು ಆರೋಪ ಮಾಡಿರುವ ಸಮಾರಂಭದ ವೇದಿಕೆಯಲ್ಲಿದ್ದ ಎಲ್ಲರ ವಿವರ ಪೋಲೀಸ್, ಗುಪ್ತಚರ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ತಿಳಿದಿದ್ದರೂ ಅವರು ಯಾರಿಗೂ ತಿಳಿಯದ ವಿವರ ಯತ್ನಾಳರಿಗೆ ತಿಳಿದದ್ದು ವಿಪರ್ಯಾಸವೇ ಸರಿ, ಯತ್ನಾಳರು ಈ ಹಿಂದೆಯೂ ಮುಸ್ಲಿಮರ ಬಗ್ಗೆ ಇಲ್ಲಸಲ್ಲದ ಆರೋಪ ಹೊರಿಸುತ್ತಲೇ ಬಂದಿದ್ದಾರೆ, ಸಮಾಜದಲ್ಲಿ ಕೋಮು ವೈಷಮ್ಯ ಸೃಷ್ಟಿಸಲು ಯತ್ನಿಸುತ್ತಿರುವ ಇಂತಹ ಸಮಾಜಫಾತಕ ಶಕ್ತಿಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಜಮಾಅತ್ ಒತ್ತಾಯಿಸಿದೆ.
ಈ ಬಗ್ಗೆ ರಾಜ್ಯದ ರಾಜ್ಯಪಾಲರಿಗೆ ಮುಖ್ಯಮಂತ್ರಿ, ಗ್ರಹಮಂತ್ರಿ ಮತ್ತು ವಿಧಾನ ಸಭಾಧ್ಯಕ್ಷರಿಗೆ ಪತ್ರ ಬರೆದಿರುವ ಕರ್ನಾಟಕ ಮುಸ್ಲಿಂ ಜಮಾಅತ್ ಶಾಸಕರ ವಿರುಧ್ಧ ಸೂಕ್ತ ಕ್ರಮಕ್ಕಾಗಿ ಮನವಿ ನೀಡಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ