ಮಂಗಳೂರು; ಎಸ್ವೈಎಸ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವತಿಯಿಂದ ಏಳು ಝೋನ್ಗಳ ಕ್ಯಾಬಿನೆಟ್ ನಾಯಕರಿಗಾಗಿ TOPS PLUS ಕಾರ್ಯಕ್ರಮವು ಜಿಲ್ಲಾಧ್ಯಕ್ಷ ವಿ.ಯು.ಇಸ್ಹಾಕ್ ಝುಹ್ರಿ ಕಾನೆಕೆರೆ ಅಧ್ಯಕ್ಷತೆಯಲ್ಲಿ ಅಡ್ಯಾರ್ ಕಣ್ಣೂರ್ ಸುನ್ನೀ ಸೆಂಟರ್ ನಲ್ಲಿ ನಡೆಯಿತು .

ರಾಜ್ಯ ಇಸಾಬಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮಾಲಿಕಿ ಬೋಳಂತೂರು ಸಭೆಯನ್ನು ಉದ್ಘಾಟಿಸಿದರು. ಎಸ್ವೈಎಸ್ ರಾಜ್ಯ ನಾಯಕರಾದ ಮುಹಮ್ಮದ್ ಅಲಿ ಸಖಾಫಿ ಸುರಿಬೈಲ್ ತರಗತಿ ನಡೆಸಿದರು.
ಜಿಲ್ಲಾ ವ್ಯಾಪ್ತಿಯ ಏಳು ಝೋನ್ ಕ್ಯಾಬಿನೆಟ್ ನಾಯಕರ ನಡುವೆ ಸಾಂಘಿಕ ಚಟುವಟಿಕೆ ಬಗ್ಗೆ ಅವಲೋಕನ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ನಾಯಕರಾದ ಬಶೀರ್ ಮದನಿ ಕೂಳೂರು, ಆಸಿಫ್ ಹಾಜಿ ಕೃಷ್ಣಾಪುರ, ಜಿಲ್ಲಾ ಕೋಶಾಧಿಕಾರಿ ನಝೀರ್ ಮುಡಿಪು, ಜಿಲ್ಲಾ ಕಾರ್ಯದರ್ಶಿಗಳಾದ ಬದ್ರುದ್ದೀನ್ ಅಝ್ಜರಿ ಕೈಕಂಬ, ಮೆಹಬೂಬ್ ಸಖಾಫಿ ಕಿನ್ಯ, ಬಶೀರ್ ಸಖಾಫಿ ಉಳ್ಳಾಲ, ಖಾಲಿದ್ ಹಾಜಿ ಭಟ್ಕಳ, ಅಬ್ದುರ್ರಝಾಕ್ ಭಾರತ್ ಮಂಚಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಹಾಜಿ ಪ್ರಿಂಟೆಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ