ಮನಾಮ: ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಕೆಸಿಎಫ್ ಮುಖವಾಣಿ ಗಲ್ಫ್ ಇಶಾರ ಅಭಿಯಾನದ ಉದ್ಘಾಟನೆ ಹಾಗೂ ಕರ್ನಾಟಕ ರಾಜ್ಯ ವಿಧಾನ ಸಭೆಯ ಸ್ಪೀಕರ್ ಸನ್ಮಾನ್ಯ ಯು. ಟಿ. ಖಾದರ್ ರವರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವು ಗುದೈಬಿಯಾ ಕೆಸಿಎಫ್ ಸೆಂಟರಿನಲ್ಲಿ ನಡೆಯಿತು.
ಅಸ್ಸಯ್ಯಿದ್ ಆಟಕೋಯ ತಂಙಳ್ ಆದೂರು ರವರ ದುಆದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಅಧ್ಯಕ್ಷತೆ ವಹಿಸಿದ್ದರು.

ಕೆಸಿಎಫ್ ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆ ಅಧ್ಯಕ್ಷರಾದ ಖಲಂದರ್ ಮುಸ್ಲಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಸನ್ಮಾನ್ಯ ಯು.ಟಿ.ಖಾದರ್ ರವರು ಮಾತನಾಡಿ ಸಾತ್ವಿಕ ಉಲಮಾಗಳ ನಾಯಕತ್ವದಲ್ಲಿ ಕಾರ್ಯಾಚರಿಸುತ್ತಿರುವ ಕೆಸಿಎಫ್ ನ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು.
ಯುವ ಉದ್ಯಮಿ ಮನ್ಸೂರ್ ಹೆಜಮಾಡಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪ್ರಾಸ್ತಾವಿಕ ಭಾಷಣ ಮಾಡಿದ ಕೆಸಿಎಫ್ ಬಹರೈನ್ ರಾಷ್ಟೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಕೆಸಿಎಫ್ ನ ಕಾರ್ಯ ವೈಖರಿ ಗಳ ಬಗ್ಗೆ ವಿವರಿಸುತ್ತಾ ದಶಮನೋತ್ಸವದ ಭಾಗವಾಗಿ ಕೆಸಿಎಫ್ ಹಮ್ಮಿಕೊಂಡ ಕಾರ್ಯ ಯೋಜನೆಗಳನ್ನು ಯಶಸ್ವಿಗೊಳಿಸಲು ಸರ್ವರೂ ಸಹಕರಿಸಬೇಕೆಂದು ಕರೆ ನೀಡಿದರು.
ವೇದಿಕೆಯಲ್ಲಿ ಆಸಿಫ್ ಉಳ್ಳಾಲ, ಯು.ಟಿ. ಇಫ್ತಿಕಾರ್, ಶಿರಾಜ್ ಕಿನ್ಯ ಮುಂತಾದ ಗಣ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ಸೂಫಿ ಪೈಂಬಚ್ಚಾಲ್, ಶಿಕ್ಷಣ ವಿಭಾಗದ ಅಧ್ಯಕ್ಷರಾದ ಹನೀಫ್ ಮುಸ್ಲಿಯಾರ್ ರೆಂಜ, ಕಾರ್ಯದರ್ಶಿ ಅಶ್ರಫ್ ರೆಂಜಾಡಿ, ಸಂಘಟನಾ ಇಲಾಖೆ ಕಾರ್ಯದರ್ಶಿ ಮನ್ಸೂರ್ ಬೆಳ್ಮ, ಸಾಂತ್ವನ ವಿಭಾಗದ ಅದ್ಯಕ್ಷರಾದ ಸುಹೈಲ್ ಬಿ.ಸಿ. ರೋಡ್ ಕಾರ್ಯದರ್ಶಿ ರಝಾಖ್ ಆನೇಕಲ್, ಪ್ರಕಾಶನ ವಿಭಾಗದ ಅಧ್ಯಕ್ಷರಾದ ಲತೀಫ್ ಪೇರೋಳಿ, ಇಹ್ಸಾನ್ ವಿಭಾಗದ ಕಾರ್ಯದರ್ಶಿ ನಝೀರ್ ಹಾಜಿ ದೇರ್ಳಕಟ್ಟೆ, ಆಡಳಿತ ವಿಭಾಗದ ಅಧ್ಯಕ್ಷರಾದ ಸವಾದ್ ಉಳ್ಳಾಲ, ಕಾರ್ಯದರ್ಶಿ ಅನ್ಸಾರ್ ಬಜ್ಪೆ, ಹಾಗೂ ಝೋನಲ್, ಸೆಕ್ಟರುಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಪ್ರಕಾಶನ ವಿಭಾಗದ ಕಾರ್ಯದರ್ಶಿ ತೌಫೀಖ್ ಬೆಳ್ತಂಗಡಿ ಧನ್ಯವಾದ ಸಮರ್ಪಿಸಿದರು.
✍️ ಎಂ.ಎ. ವೇಣೂರು, ಬಹರೈನ್.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್