ಮೈಸೂರಿನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮುಸ್ಲಿಮ್ ಮಹಿಳೆಯರನ್ನು ಉದ್ದೇಶಿಸಿ ನೀಡಿದ ಹೇಳಿಕೆ ಕೋಮು ಪ್ರಚೋದನಕಾರಿ ಆಗಿದೆ. ಭಟ್ ಆ ಮೂಲಕ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿ , ಮತೀಯ ಉದ್ವಿಗ್ನತೆ ಸೃಷ್ಟಿಸುವ ಮತ್ತು ಮತೀಯ ಗಲಭೆಗಳನ್ನು ಹುಟ್ಟು ಹಾಕುವ ರೀತಿಯ ಹೇಳಿಕೆ ನೀಡಿರುತ್ತಾರೆ ಎಂದು ಕರ್ನಾಟಕ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು,ಸರಕಾರ ಮತ್ತು ಜಿಲ್ಲಾಡಳಿತ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಪ್ರಕರಣ ದಾಖಲು ಗೊಳಿಸಬೇಕು. ರಾಜ್ಯದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಸರ್ಕಾರ ಮತ್ತು ಪೊಲೀಸರೇ ಹೊಣೆ. ಕಲ್ಲಡ್ಕ ಭಟ್ಟರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸು ಸ್ಟೇಶನ್ ನಲ್ಲಿ ಈ ಬಗ್ಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದರು.
ನಿಯೋಗದಲ್ಲಿ ಅಬ್ದುಲ್ ಜಲೀಲ್,ಅಶ್ರಫ್ ಬದ್ರಿಯಾ, ಸಾಲಿಹ್ ಬಜ್ಪೆ, ಹಿದಾಯತ್ ಮಾರಿಪಲ್ಲ,ಹಿದಾಯತ್ ಕೃಷ್ಣಾಪುರ,ಮೊಹಮ್ಮದ್ ಹನೀಫ್.ಯು, ವಿ.ಏಚ್. ಕರೀಮ್, ಸೋಶಿಯಲ್ ಫಾರೂಕ್ ಮತ್ತಿತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ