ರಿಯಾದ್: ಕೊಲೆ ಪ್ರಕರಣದಲ್ಲಿ ಸೌದಿ ಜೈಲಿನಲ್ಲಿದ್ದ ಭಾರತೀಯನ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲಾಗಿದೆ. ಕರ್ನಾಟಕದ ಮಂಗಳೂರು ಮೂಲದ ಸಮದ್ ಸ್ವಾಲಿಹ್ ಹಸನ್ ಎಂಬವರ ಮರಣದಂಡನೆ ಜಾರಿಗೊಳಿಸಲಾಗಿದೆ ಎಂದು ದಮ್ಮಾಮ್ ಜೈಲು ಅಧಿಕಾರಿಗಳು ಘೋಷಿಸಿದ್ದಾರೆ.
11 ವರ್ಷಗಳ ಹಿಂದೆ ಈ ಪ್ರಕರಣದಲ್ಲಿ ಸಮದ್ ರನ್ನು ಬಂಧಿಸಲಾಗಿತ್ತು. ಇಂದು ಬೆಳಗ್ಗೆ ಮರಣದಂಡನೆ ಶಿಕ್ಷೆ ವಿಧಿಸಲಾಯಿತು.
ಮನೆ ಚಾಲಕನಾಗಿ ಸೌದಿ ಅರೇಬಿಯಾಕೆ ಆಗಮಿಸಿದ್ದ ಸಮದ್ 11 ವರ್ಷಗಳ ಹಿಂದೆ, ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುವ ವೇಳೆ ತಡೆಯಲು ಬಂದಿದ್ದ ಸೌದಿ ಪೂರ್ವ ಪ್ರಾಂತ್ಯದ ಅಲಿ ಬಿನ್ ತ್ರಾದ್ ಅಲ್-ಅನಾಸಿ ಎಂಬ ಸೌದಿ ಪ್ರಜೆಯನ್ನು ಬಟ್ಟೆಯಿಂದ ಕಟ್ಟಿ ಉಸಿರುಗಟ್ಟಿಸಿ ಹತ್ಯೆ ನಡೆಸಲಾಗಿತ್ತು. ಬಳಿಕ ಪೊಲೀಸರು ಸಮದ್ನನ್ನು ಬಂಧಿಸಿ,ವಿಚಾರಣೆ ವೇಳೆ ಸಮದ್ ತಪ್ಪೊಪ್ಪಿಕೊಂಡಿದ್ದರು. ಕೊನೆಯಲ್ಲಿ, ಸುಪ್ರೀಂ ಕೋರ್ಟ್ ಮರಣದಂಡನೆಯನ್ನು ವಿಧಿಸಿತ್ತು. ಕೊಲ್ಲಲ್ಪಟ್ಟ ವ್ಯಕ್ತಿಯ ಸಂಬಂಧಿಕರು ಕ್ಷಮಾಪಣೆಗೆ ಸಿದ್ಧರಿಲ್ಲದ ಕಾರಣ ಅಂತಿಮವಾಗಿ ಮರಣದಂಡನೆಯನ್ನು ಜಾರಿಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ