ಪರಂಪರೆಯ ಪ್ರತಿನಿಧಿಗಳಾಗೋಣ ಎಂಬ ದ್ಯೇಯ ವಾಕ್ಯದಲ್ಲಿ ಕರುನಾಡ ಮಣ್ಣು ಮಂಗಳೂರಲ್ಲಿ ಜನವರಿ 24ರಂದು ನಡೆಯುವ ಸುನ್ನೀ ಯುವಜನ ಸಂಘ (S Y S) ಇದರ 30 ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಚಾರ ಸಭೆಯು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಅಲ್ ಖಸೀಂ ಝೋನಿನ ವತಿಯಿಂದ ಬುರೈದಾದ ದಾರುಲ್ ಖ್ಯೆರ್ ನಲ್ಲಿ ಡಿಸೆಂಬರ್ 29 ನೇ ಶುಕ್ರವಾರ ನಡೆಯಿತು
ಎಸ್ ವೈ ಎಸ್ ಕರ್ನಾಟಕ ರಾಜ್ಯ ನೇತಾರ ಸೈಯದ್ ಇಲ್ಯಾಸ್ ತಂಙಲ್ ಎಮ್ಮೆಮಾಡುರವರ ದುವಾದೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ಕೆ, ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳಾದ ಯಾಕೂಬ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಕೆ, ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಪ್ರದಾನ ಕಾರ್ಯದರ್ಶಿ ಸಾಲಿ ಬೆಳ್ಳಾರೆ ಉದ್ಘಾಟಿಸಿದರು
ಎಸ್ ವೈ ಎಸ್ ನ ಮೂವತ್ತು ವರ್ಷಗಳ ಏಳಿಗೆ ಹಾಗೂ ಸಂಘಟನೆಯ ಬೆಳವಣಿಗೆಗೆ ಹೊಸ ದಾರಿಗಳ ಬಗ್ಗೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಎಸ್ ವೈ ಎಸ್ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಬಶೀರ್ ಸಅದಿ ಬೆಂಗಳೂರು ಉಸ್ತಾದರವರು ಸವಿವರವಾಗಿ ವಿವರಿಸಿದರು
ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ಇಹ್ಸಾನ್ ಇಲಾಖೆ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಕಣ್ಣಂಗಾರ್, ಕೆ.ಸಿ.ಎಫ್ ಸೌದಿ ರಾಷ್ಟ್ರೀಯ ಸಮಿತಿ ನೇತಾರ ಸಿದ್ದೀಕ್ ಸಖಾಫಿ ಪೆರುವಾಯಿ ಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು
ಬುರೈದ ಸೆಕ್ಟರ್ ಅಧ್ಯಕ್ಷರಾದ ಮುಸ್ತಫಾ ಲತೀಫಿ ಸ್ವಾಗತಿಸಿ ಝೋನ್ ಕಾರ್ಯದರ್ಶಿ ಬಶೀರ್ ಕನ್ಯಾನ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ