ಕೋಝಿಕ್ಕೋಡ್: ವಿವಾದಾತ್ಮಕ ಹೇಳಿಕೆಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಸಮಸ್ತ ಜಂಟಿ ಕಾರ್ಯದರ್ಶಿ ಉಮರ್ ಫೈಝಿ ಮುಕ್ಕಂ ಪ್ರತಿಕ್ರಿಯಿಸಿದ್ದಾರೆ. ತಲೆಗೆ ಶಾಲು ಹಾಕದ ಮಹಿಳೆಯರೆಲ್ಲರೂ ಸ್ವಚ್ಛಂದವಾಗಿ ವರ್ತಿಸುತ್ತಾರೆ ಎಂದು ಹೇಳಿಲ್ಲ ಎಂದು ಉಮರ್ ಫೈಝಿ ಮುಕ್ಕಂ ಹೇಳಿದರು.
ಈ ಹಿಂದೆ ಪೊಲೀಸ್ ಠಾಣೆಯಿಂದ ಕರೆ ಮಾಡಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನಂತರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದೂ ತಿಳಿಸಲಾಗಿತ್ತು. ಎರಡು ತಿಂಗಳ ಬಳಿಕ ಈಗ ಯಾಕೆ ಕೇಸ್ ತೆಗೆದುಕೊಂಡಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಉಮರ್ ಫೈಝಿ ಮುಕ್ಕಂ ಹೇಳಿದರು.
ಇದೀಗ ಉಮರ್ ಫೈಝಿ ವಿರುದ್ಧ ಪ್ರಕರಣ ದಾಖಲಾಗಿದೆ. ‘ನಿಸಾ’ ಅಧ್ಯಕ್ಷೆ ಹಾಗೂ ಸಮಾಜ ಸೇವಕಿ ವಿ.ಪಿ.ಝೊಹರಾ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಉಮರ್ ಫೈಝಿ ಅವರು ಮುಸ್ಲಿಂ ಮಹಿಳೆಯರು ತಲೆಗೆ ಶಾಲು ಹಾಕದೆ ಸ್ವಚ್ಛಂದವಾಗಿ ವರ್ತಿಸಲು ಸಮ್ಮತಿಸಲಾದು ಎಂಬ ಮಾತು ಬಹಳ ವಿವಾದಕ್ಕೀಡಾಗಿತ್ತು. ಈ ಹೇಳಿಕೆ ವಿರುದ್ಧ ಝೊಹರಾ ಪೊಲೀಸ್ ದೂರು ದಾಖಲಿಸಿದ್ದಾರೆ. ಉಮರ್ ಫೈಝಿ ವಿರುದ್ಧ ಕೋಝಿಕ್ಕೋಡ್ ನಡಕಾವ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಮರ್ ಫೈಝಿ ಧಾರ್ಮಿಕ ಘರ್ಷಣೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಐಪಿಸಿ 295ಎ ಮತ್ತು 298 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಅಕ್ಟೋಬರ್ನಲ್ಲಿ ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹೇಳಿಕೆ ವಿರುದ್ಧ ಭಾರೀ ಪ್ರತಿಭಟನೆ ನಡೆದಿದೆ. ಕುಟುಂಬಶ್ರೀಯ ‘ಬ್ಯಾಕ್ ಟು ಸ್ಕೂಲ್’ ಕಾರ್ಯಕ್ರಮಕ್ಕೆ ಅತಿಥಿಯಾಗಿ ಝೊಹರಾ ಶಾಲು ತೆಗೆದು ಪ್ರತಿಭಟನೆ ನಡೆಸಿದ್ದು ಕೂಡ ಭಾರೀ ಸುದ್ದಿಯಾಗಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ