ಬೆಂಗಳೂರು :ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದಿದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು.
“ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ ಮಧ್ಯಂತರ ಜಾಮೀನು ತಕ್ಷಣ ರದ್ದು ಮಾಡಬೇಕು. ದೇಶಕ್ಕಿಂತ ಮಿಗಿಲು ಯಾರೂ ಇಲ್ಲ. ಸುಪ್ರಿಂ ಕೋರ್ಟ್ ದ್ವೇಷ ಭಾಷಣದ ಬಗ್ಗೆ ಆದೇಶ ನೀಡಿದ್ದು ಮಾತ್ರವಲ್ಲ, ತೀಕ್ಷ್ಮವಾದ ಸೂಚನೆಗಳನ್ನು ಎಲ್ಲಾ ರಾಜ್ಯಗಳಿಗೆ ನೀಡಿದೆ” ಎಂದು ಬಾಲನ್ ವಾದ ಮಂಡಿಸಿದರು.
“ಪ್ರಭಾಕರ ಭಟ್ ಈ ರೀತಿ ಕೃತ್ಯಗಳ ಚಾಳಿ ಹೊಂದಿದ್ದಾನೆ. ದ್ವೇಷ ಭಾಷಣ ಎನ್ನುವುದು ದೇಶ ಒಡೆಯುವ ಕೃತ್ಯ ಎಂದು ಸುಪ್ರಿಂ ಕೋರ್ಟ್ 2021 ಅಕ್ಟೋಬರ್ 21 ರ ಆದೇಶದಲ್ಲಿ ಹೇಳಿದೆ. ಹಾಗಾಗಿ ಇದು ದೇಶದ್ರೋಹದ ಕೃತ್ಯ” ಎಂದು ಪ್ರಾಥಮಿಕ ವಾದ ಮಂಡಿಸಿದರು.
ವಿಚಾರಣೆಯನ್ನು ಜನವರಿ 10 ಕ್ಕೆ ಮುಂದೂಡಿದ್ದು, ಅಂದು ಸಂಜೆ 4 ಗಂಟೆಗೆ ವಿಸ್ತೃತ ವಾದ ನಡೆಯಲಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಹನುಮ ಶೋಭಾಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, “ಹಿಂದೆ ತಲಾಕ್ ತಲಾಕ್ ಎಂದು ಹೇಳಿ ತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ” ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ