ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಇದರ ರಾಜ್ಯ ಮಟ್ಟದ ಮಹಾ ಸಮ್ಮೇಳನದ ಪ್ರಚಾರಾರ್ಥ ಆಕ್ಷನ್-24 ಕಾರ್ಯಕ್ರಮವು ಪಾಣೆಮಂಗಳೂರು ಎಸ್ ಎಸ್ ಆಡಿಟೋರಿಯಂ ನಲ್ಲಿ ನಡೆಯಿತು.
ಎಸ್ ವೈ ಎಸ್ ಪ್ರಚಾರ ಸಮಿತಿಯ ಚೇರ್ ಮಾನ್ ಎಂ ಪಿ ಎಂ ಅಶ್ರಫ್ ಸಅದಿ ಮಲ್ಲೂರು ಅಧ್ಯಕ್ಷತೆ ವಹಿಸಿದರು. ಸಮಿತಿಯ ಕೋಆರ್ಡಿನೇಟರ್ ಹಾಫಿಳ್ ಯಾಕೂಬ್ ಸಅದಿ ನಾವೂರು ಮುನ್ನುಡಿಯಾಗಿ ವಿಷಯ ಮಂಡಿಸಿದರು. ಎಸ್ ವೈ ಎಸ್ ರಾಜ್ಯ ನಾಯಕ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಮುಖ್ಯಭಾಷಣ ಮಾಡಿದರು.
ಮುಸ್ಲಿಂ ಜಮಾಅತ್ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಂ ಸಅದಿ ಖತರ್, ಅಬ್ದುಲ್ ಲತೀಫ್ ಮಾಸ್ಟರ್ ಮಾತನಾಡಿದರು.
,ಎಸ್ ವೈ ಎಸ್ ನಾಯಕರಾದ ಬಶೀರ್ ಮದನಿ ಅಲ್ ಕಾಮಿಲಿ, ಹಂಝ ಮದನಿ ತೆಂಕಕಾರಂದೂರು, ಇಸ್ಮಾಯಿಲ್ ಮಾಸ್ಟರ್ ಮಂಜನಾಡಿ, ಖಾಲಿದ್ ಹಾಜಿ ಭಟ್ಕಳ, ನವಾಜ್ ಸಖಾಫಿ ಅಡ್ಯಾರ್, ಸಲೀಂ ಕನ್ಯಾಡಿ, ಬಶೀರ್ ಸಖಾಫಿ ಉಳ್ಳಾಲ, ಮಜೀದ್ ಸಖಾಫಿ ಅಮ್ಮುಂಜೆ, ರಝಾಕ್ ಭಾರತ್, ಎಸ್ಸೆಸ್ಸೆಫ್ ನಾಯಕರಾದ ಮುಹಮ್ಮದ್ ಮಿಸ್ಬಾಹಿ ಮರ್ದಾಳ, ಇರ್ಷಾದ್ ಹಾಜಿ ಗೂಡನಬಳಿ ರಶೀದ್ ಹಾಜಿ ವಗ್ಗ ಮುಂತಾದವರು ಭಾಗವಹಿಸಿದರು.
ದ. ಕ ಜಿಲ್ಲಾ ವ್ಯಾಪ್ತಿಯ ಹದಿಮೂರು ಝೋನ್ ಗಳ ಪ್ರಚಾರ ಸಮಿತಿಯನ್ನು ರಚಿಸಲಾಯಿತು. ಜನವರಿ 13ರಿಂದ 17ರ ವರೆಗೆ ಸರ್ಕಲ್ ಪ್ರಯಾಣ ಸಂದೇಶ ಜಾಥಾ ನಡೆಸಲು ತೀರ್ಮಾನಿಸಲಾಯಿತು.
ಪ್ರಚಾರ ಸಮಿತಿಯ ಮಹಬೂಬ್ ಸಖಾಫಿ ಸ್ವಾಗತಿಸಿ ಸಲೀಂ ಕನ್ಯಾಡಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ