ಕಾವಳಕಟ್ಟೆ : ಉತ್ತರ ಪ್ರದೇಶದ ಲಕ್ನೋದ ಘೋಸಿ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಅತ್ಯುನ್ನತ ಧಾರ್ಮಿಕ ವಿದ್ಯಾನಿಲಯ ಜಾಮಿಆ ಅಮ್ಜದಿಯ್ಯ ದಲ್ಲಿ ಉನ್ನತ ವಿದ್ಯಾಭ್ಯಾಸ ಕಲಿತು ಬಿರುದುದಾರಿಗಳಾದ ಕರ್ನಾಟಕ ರಾಜ್ಯದ ಅಮ್ಜದಿಗಳ ಸಂಘಟನೆ ಕರ್ನಾಟಕ ರಾಜ್ಯ ಅಮ್ಜದೀಸ್ ಅಸೋಸಿಯೇಷನ್ ನ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು 2024 ಜನವರಿ 2 ಮಂಗಳವಾರ ದಂದು ಕಾವಳಕಟ್ಟೆ ಅಲ್ ಖಾದಿಸಾ ಸಂಸ್ಥೆಯ ಶರೀಅತ್ ಕಾಲೇಜು ಹಾಲ್ ನಲ್ಲಿ ಅಲ್ಲಿನ ಪ್ರಧಾನ ಮುದರ್ರಿಸ್ ಹಾಗೂ ರಾಜ್ಯ ಅಮ್ಜದೀಸ್ ಗೌರವ ಅಧ್ಯಕ್ಷರು ಆದ ಮೌಲಾನ ಯೂಸುಫ್ ರಝಾ ಅಮ್ಜದಿ ದಾವಣಗೆರೆ ಉಸ್ತಾದರ ನೇತ್ರತ್ವದಲ್ಲಿ ನಡೆಯಿತು.

ಅಝೀಝ್ ರಝಾ ಅಮ್ಜದಿ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ಹನೀಫ್ ರಝಾ ಅಮ್ಜದಿ ಮುಖ್ಯ ಭಾಷಣ ಮಾಡಿದರು,
ನೂತನ ಅದ್ಯಕ್ಷರಾಗಿ ಎ ಕೆ ರಝಾ ಅಮ್ಜದಿ, ಪ್ರಧಾನ ಕಾರ್ಯದರ್ಶಿಯಾಗಿ ಹಾಫಿಲ್ ಮುಈನುದ್ದೀನ್ ರಝಾ ಅಮ್ಜದಿ ಉಳ್ಳಾಲ, ಫೈನಾನ್ಸಿಯಲ್ ಕಾರ್ಯದರ್ಶಿಯಾಗಿ ಇಲ್ಯಾಸ್ ರಝಾ ಅಮ್ಜದಿ ಮಂಡೆಕೋಲು,
ಉಪಾದ್ಯಕ್ಷರುಗಳಾಗಿ ನಝೀರ್ ರಝಾ ಅಮ್ಜದಿ, ಉಮರುಲ್ ಫಾರೂಕ್ ರಝಾ ಅಮ್ಜದಿ ಕುಂಡಡ್ಕ, ದಅವಾ ಕಾರ್ಯದರ್ಶಿಯಾಗಿ ಡಾಕ್ಟರ್ ಹನೀಫ್ ರಝಾ ಅಮ್ಜದಿ, ಮೀಡಿಯಾ ಕಾರ್ಯದರ್ಶಿ ಯಾಗಿ ಆಸಿಫ್ ರಝಾ ಅಮ್ಜದಿ ಹಾಗೂ ಹನ್ನೊಂದು ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು . ಫಾರೂಕ್ ರಝಾ ಅಮ್ಜದಿ ಕುಂಡಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ