ಬೆಂಗಳೂರು : ಬೆಂಗಳೂರು ಮೂಲದ ಮರ್ಕಝ್ ಖೈಖಾ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಇಸ್ಲಾಮಿಕ್ ಸ್ಟಡೀಸ್ (ಮರ್ಕಿನ್ಸ್) ವತಿಯಿಂದ ನೀಡಲಾಗುವ ಮೊದಲ SSA ಖಾದರ್ ಹಾಜಿ ಮೆಮೋರಿಯಲ್ ಅವಾರ್ಡ್ ಸಯ್ಯದ್ ಮುಹಮ್ಮದ್ ಮಿದ್ಲಾಜ್ ಖಾದಿರಿ ಅವರಿಗೆ ಲಭಿಸಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಅತ್ಯುತ್ತಮ ಕೊಡುಗೆ ನೀಡಿದ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಜಾಮಿಅಃ ಮರ್ಕಝುಸ್ಸಖಾಫತಿ ಸುನ್ನಿಯ್ಯದ ಕಾರ್ಯಕಾರಿ ಉಪಾಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಎಸ್.ಎಸ್. ಅಬ್ದುಲ್ ಖಾದರ್ ಹಾಜಿ, ಬೆಂಗಳೂರಿನ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಇತಿಹಾಸ ಸೃಷ್ಟಿಸಿದ ವ್ಯಕ್ತಿತ್ವ.
ಉತ್ತರ ಕರ್ನಾಟಕ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಯ್ಯದ್ ಮಿದ್ಲಾಜ್ ಖಾದಿರಿ ಅವರ ಕಾರ್ಯ ಚಟುವಟಿಕೆಗಳಿಗೆ ಈ ಪ್ರಶಸ್ತಿ ಸಂದಿದೆ. ಸಂಸ್ಥೆಯ ವಾರ್ಷಿಕ ಕಲಾ ಕಾರ್ಯಕ್ರಮ ಆರ್ಟೋರಿಕ್ಸ್-24 ರಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್, ಸಯ್ಯದ್ ಮಿದ್ಲಾಜ್ ಖಾದಿರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಮರ್ಕಿನ್ಸ್ ಪ್ರಾಂಶುಪಾಲರಾದ ಜಾಫರ್ ಅಹ್ಮದ್ ನೂರಾನಿ, ಉಪ ಪ್ರಾಂಶುಪಾಲರಾದ ಹಬೀಬುಲ್ಲಾ ನೂರಾನಿ, ಅಧ್ಯಕ್ಷ ಅಬ್ದುರಝಾಕ್, ಜನಾಬ್ ಸುಹೇಲ್ ಸೇಠ್, ಜನಾಬ್ ಮಸೂದ್ ಕರೀಂ ಸೇರಿದ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಸರಗೋಡು ಜಿಲ್ಲೆಯವರಾದ ಸಯ್ಯದ್ ಮಿದ್ಲಾಜ್ ಖಾದಿರಿ ಅವರು ಪ್ರಸ್ತುತ ಸಂಸ್ಥೆಯ ಹಳೆಯ ವಿದ್ಯಾರ್ಥಿ ಸಂಘಟನೆಯಾದ ಕ್ವೆಸ್ಟ್ ಫೌಂಡೇಶನ್ ನ ಡೈರೆಕ್ಟರ್ ಜನರಲ್ ಆಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್