ಬೆಂಗಳೂರು : ಬೆಂಗಳೂರು ಮೂಲದ ಮರ್ಕಝ್ ಖೈಖಾ ಇನ್ಸ್ಟಿಟ್ಯೂಟ್ ಆಫ್ ಹೈಯರ್ ಇಸ್ಲಾಮಿಕ್ ಸ್ಟಡೀಸ್ (ಮರ್ಕಿನ್ಸ್) ವತಿಯಿಂದ ನೀಡಲಾಗುವ ಮೊದಲ SSA ಖಾದರ್ ಹಾಜಿ ಮೆಮೋರಿಯಲ್ ಅವಾರ್ಡ್ ಸಯ್ಯದ್ ಮುಹಮ್ಮದ್ ಮಿದ್ಲಾಜ್ ಖಾದಿರಿ ಅವರಿಗೆ ಲಭಿಸಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಅತ್ಯುತ್ತಮ ಕೊಡುಗೆ ನೀಡಿದ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಜಾಮಿಅಃ ಮರ್ಕಝುಸ್ಸಖಾಫತಿ ಸುನ್ನಿಯ್ಯದ ಕಾರ್ಯಕಾರಿ ಉಪಾಧ್ಯಕ್ಷರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಎಸ್.ಎಸ್. ಅಬ್ದುಲ್ ಖಾದರ್ ಹಾಜಿ, ಬೆಂಗಳೂರಿನ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ-ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರಾಂತಿಕಾರಿ ಇತಿಹಾಸ ಸೃಷ್ಟಿಸಿದ ವ್ಯಕ್ತಿತ್ವ.
ಉತ್ತರ ಕರ್ನಾಟಕ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಸಯ್ಯದ್ ಮಿದ್ಲಾಜ್ ಖಾದಿರಿ ಅವರ ಕಾರ್ಯ ಚಟುವಟಿಕೆಗಳಿಗೆ ಈ ಪ್ರಶಸ್ತಿ ಸಂದಿದೆ. ಸಂಸ್ಥೆಯ ವಾರ್ಷಿಕ ಕಲಾ ಕಾರ್ಯಕ್ರಮ ಆರ್ಟೋರಿಕ್ಸ್-24 ರಲ್ಲಿ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್, ಸಯ್ಯದ್ ಮಿದ್ಲಾಜ್ ಖಾದಿರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಮರ್ಕಿನ್ಸ್ ಪ್ರಾಂಶುಪಾಲರಾದ ಜಾಫರ್ ಅಹ್ಮದ್ ನೂರಾನಿ, ಉಪ ಪ್ರಾಂಶುಪಾಲರಾದ ಹಬೀಬುಲ್ಲಾ ನೂರಾನಿ, ಅಧ್ಯಕ್ಷ ಅಬ್ದುರಝಾಕ್, ಜನಾಬ್ ಸುಹೇಲ್ ಸೇಠ್, ಜನಾಬ್ ಮಸೂದ್ ಕರೀಂ ಸೇರಿದ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಸರಗೋಡು ಜಿಲ್ಲೆಯವರಾದ ಸಯ್ಯದ್ ಮಿದ್ಲಾಜ್ ಖಾದಿರಿ ಅವರು ಪ್ರಸ್ತುತ ಸಂಸ್ಥೆಯ ಹಳೆಯ ವಿದ್ಯಾರ್ಥಿ ಸಂಘಟನೆಯಾದ ಕ್ವೆಸ್ಟ್ ಫೌಂಡೇಶನ್ ನ ಡೈರೆಕ್ಟರ್ ಜನರಲ್ ಆಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ