ಕುವೈತ್: ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿ ಇದರ 30ನೇ ವಾರ್ಷಿಕೋತ್ಸವದ ಪ್ರಚಾರಾರ್ಥವಾಗಿ ಕುವೈತ್ ಕಮಿಟಿ ವತಿಯಿಂದ ನಡೆಸ್ಪಟ್ಟ ಸಮಾರಂಭವು ಜನವರಿ 8ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಪ್ರಮುಖ ಅಥಿತಿಗಳಾಗಿ ಮದನಿಯಂ ಲತೀಫ್ ಸಖಾಫಿ ಉಸ್ತಾದ್ ಮತ್ತು ಅಲ್ ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಯ್ಯಿದ್ ಮಂಕಫ್ ತಂಙಳ್ ದುಆ ನೇತೃತ್ವ ವಹಿಸಿದರು. ಅಲ್ ಮದೀನಾ ಮಂಜನಾಡಿ ಕುವೈತ್ ಇದರ ಸೆಕ್ರೆಟರಿಯಾದ ಜನಾಬ್ ಮೂಸಾ ಇಬ್ರಾಹೀಂ ಸ್ವಾಗತಿಸಿದರು.ಕಾರ್ಯಕ್ರಮದ ಉದ್ಘಾಟನೆಯನ್ನು KCF ಕುವೈತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಬಹು. ಹುಸೈನ್ ಎರ್ಮಾಡ್ ಉಸ್ತಾದ್ ಅವರು ನೆರವೇರಿಸಿದರು.
ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಚೆಯರ್ಮೆನ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದರು ಸಂದೇಶ ಭಾಷಣದ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.ಮದೀನಾ ಮಂಜನಾಡಿ ಇದರ ವ್ಯವಸ್ಥಾಪಕ ನಿರ್ವಾಹಕರಾದ ಅಬ್ದುಲ್ ಖಾದರ್ ಸಖಾಫಿ ಉಸ್ತಾದರು ಶರಫುಲ್ ಉಲಮಾ ಮತ್ತು ಸಂಸ್ಥೆಯ ಕುರಿತು ವಿವರಿಸಿದರು. ಶರಫುಲ್ ಉಲಮಾ(ಖ.ಸಿ) ಉಸ್ತಾದರ ಕುರಿತ ಶಾಫಿ ಜೋಕಟ್ಟೆ ಅವರ ಹಾಡು ಮನಮೋಹಕವಾಗಿತ್ತು.
ಬಳಿಕ ಅಲ್ ನಂತರ ಅಲ್ ಮದೀನಾ ಕುವೈತ್ ಕಮಿಟಿ ಇದರ ಅಧ್ಯಕ್ಷರಾದ ಶಾಹುಲ್ ಹಮೀದ್ ಸಅದಿ ಉಸ್ತಾದರು ಅಧ್ಯಕ್ಷೀಯ ಭಾಷಣ ನಡೆಸಿದರು. ನಂತರ ಅಬ್ದುಲ್ ಲತೀಫ್ ಸಖಾಫಿ ಮದನಿಯಂ ಉಸ್ತಾದರು ಮುಖ್ಯ ಪ್ರಭಾಷಣ ಮತ್ತು ಭಕ್ತಿಪೂರ್ಣ ದುಆ ನಡೆಸಿಕೊಟ್ಟರು.
ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಮುಖ ವ್ಯಕ್ತಿತ್ವಗಳನ್ನು ಪ್ರತ್ಯೇಕವಾಗಿ ಗೌರವಿಸಲಾಯಿತು. ಕೊನೆಯದಾಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಕೆಸಿಎಫ್, ಕಿಸ್ವಾ Dksc ಬಾಯರ್ Kkma ಎಲ್ಲಾ ಕಮಿಟಿ ನಾಯಕರಿಗೆ ಎಲ್ಲರಿಗೂ ಕನ್ವೀನರ್ ಹಸೈನಾರ್ ಮೊಂಟೆಪದವು ಅವರು ಧನ್ಯವಾದಗಳು ಅರ್ಪಿಸಿದರು.ನಂತರ ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.





















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ