ಅರಸೀಕೆರೆ : ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಅರಸೀಕೆರೆ ಇವರ ವತಿಯಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರದಿ ಉಪವಾಸ ಸತ್ಯಾಗ್ರಹ ರೈಲ್ವೆ ಸ್ಟೇಷನ್ ಮುಂಭಾಗ ನಡೆಯಿತು. ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಕಾರ್ಯದರ್ಶಿ ಪ್ರಭು ಕುಮಾರ್ ಮಾತನಾಡಿ ಎಸ್ ಡಬ್ಲ್ಯೂ ಆರ್ ಮಜ್ದೂರ್ ಯೂನಿಯನ್ ವತಿಯಿಂದ 2004ರ ನಂತರ ನೇಮಕಾತಿಯಾದ ಎಲ್ಲಾ ರೈಲ್ವೆ ಕಾರ್ಮಿಕರಿಗೆ ಹೊಸ ಪೆನ್ಷನ್ ಪದ್ಧತಿಯನ್ನು ರದ್ದು ಮಾಡಿ ಹಳೆ ಪೆನ್ಷನ್ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಉಪಸತ್ಯಾಗ್ರವನ್ನು ಮಾಡುತ್ತಿದ್ದೇವೆ.
ಹೊಸ ಪೆನ್ಷನ್ ಪದ್ಧತಿಯಲ್ಲಿ ನೌಕರರಿಗೆ ಪೆನ್ಷನ್ ಪದ್ಧತಿಯಲ್ಲಿ ವ್ಯತ್ಯಾಸ ಆಗಿರುವುದರಿಂದ ನಾವುಗಳು ಹಳೆ ಪೆನ್ಷನ್ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಈಗಾಗಲೇ ನಮ್ಮ ರಾಜ್ಯಮಟ್ಟದ ನಾಯಕರುಗಳು ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದ್ದರು ಪ್ರಯೋಜನ ಆಗಿಲ್ಲ ಹಾಗಾಗಿ ಈಗ ಉಪಾಸತ್ಯಾಗ್ರವನ್ನು ಮಾಡುತ್ತಿದ್ದು ಸರದಿ ರೀತಿಯಲ್ಲಿ ಉಪವಾಸ ಸತ್ಯಾಗ್ರಹವನ್ನು ಬೆಳಗ್ಗೆ 9:00 ರಿಂದ ಸಂಜೆ ಐದರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದೇವೆ.
ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮಜ್ದೂರ್ ಯೂನಿಯನ್ ಅರಸೀಕೆರೆ ಶಾಖೆಯ ಅಧ್ಯಕ್ಷ ಆಲ್ಬರ್ಟ್ ಅನಿಲ್, ಓಪನ್ ಲೈನ್ ಶಾಖೆಯ ಅಧ್ಯಕ್ಷ ರಾಘವೇಂದ್ರ ಕೆ ಎಸ್ ಖಜಾಂಚಿ ಶಿವಶಂಕರ್, ಶಶಿಧರ್ ಕುಮಾರ್, ಶೇಷಾದ್ರಿ ಗಣೇಶ್ ವಿನಯ್ ಕುಮಾರ್ ಹರಿ ಮೋಹನ್ ಮೀನಾ ದಯಾನಂದ್ ಮುಂತಾದವರು ಭಾಗವಹಿಸಿದ್ದರು
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್