ಅರಸೀಕೆರೆ : ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಅರಸೀಕೆರೆ ಇವರ ವತಿಯಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರದಿ ಉಪವಾಸ ಸತ್ಯಾಗ್ರಹ ರೈಲ್ವೆ ಸ್ಟೇಷನ್ ಮುಂಭಾಗ ನಡೆಯಿತು. ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಕಾರ್ಯದರ್ಶಿ ಪ್ರಭು ಕುಮಾರ್ ಮಾತನಾಡಿ ಎಸ್ ಡಬ್ಲ್ಯೂ ಆರ್ ಮಜ್ದೂರ್ ಯೂನಿಯನ್ ವತಿಯಿಂದ 2004ರ ನಂತರ ನೇಮಕಾತಿಯಾದ ಎಲ್ಲಾ ರೈಲ್ವೆ ಕಾರ್ಮಿಕರಿಗೆ ಹೊಸ ಪೆನ್ಷನ್ ಪದ್ಧತಿಯನ್ನು ರದ್ದು ಮಾಡಿ ಹಳೆ ಪೆನ್ಷನ್ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಉಪಸತ್ಯಾಗ್ರವನ್ನು ಮಾಡುತ್ತಿದ್ದೇವೆ.
ಹೊಸ ಪೆನ್ಷನ್ ಪದ್ಧತಿಯಲ್ಲಿ ನೌಕರರಿಗೆ ಪೆನ್ಷನ್ ಪದ್ಧತಿಯಲ್ಲಿ ವ್ಯತ್ಯಾಸ ಆಗಿರುವುದರಿಂದ ನಾವುಗಳು ಹಳೆ ಪೆನ್ಷನ್ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಈಗಾಗಲೇ ನಮ್ಮ ರಾಜ್ಯಮಟ್ಟದ ನಾಯಕರುಗಳು ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದ್ದರು ಪ್ರಯೋಜನ ಆಗಿಲ್ಲ ಹಾಗಾಗಿ ಈಗ ಉಪಾಸತ್ಯಾಗ್ರವನ್ನು ಮಾಡುತ್ತಿದ್ದು ಸರದಿ ರೀತಿಯಲ್ಲಿ ಉಪವಾಸ ಸತ್ಯಾಗ್ರಹವನ್ನು ಬೆಳಗ್ಗೆ 9:00 ರಿಂದ ಸಂಜೆ ಐದರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದೇವೆ.
ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮಜ್ದೂರ್ ಯೂನಿಯನ್ ಅರಸೀಕೆರೆ ಶಾಖೆಯ ಅಧ್ಯಕ್ಷ ಆಲ್ಬರ್ಟ್ ಅನಿಲ್, ಓಪನ್ ಲೈನ್ ಶಾಖೆಯ ಅಧ್ಯಕ್ಷ ರಾಘವೇಂದ್ರ ಕೆ ಎಸ್ ಖಜಾಂಚಿ ಶಿವಶಂಕರ್, ಶಶಿಧರ್ ಕುಮಾರ್, ಶೇಷಾದ್ರಿ ಗಣೇಶ್ ವಿನಯ್ ಕುಮಾರ್ ಹರಿ ಮೋಹನ್ ಮೀನಾ ದಯಾನಂದ್ ಮುಂತಾದವರು ಭಾಗವಹಿಸಿದ್ದರು
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ