ಅರಸೀಕೆರೆ : ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಅರಸೀಕೆರೆ ಇವರ ವತಿಯಿಂದ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರದಿ ಉಪವಾಸ ಸತ್ಯಾಗ್ರಹ ರೈಲ್ವೆ ಸ್ಟೇಷನ್ ಮುಂಭಾಗ ನಡೆಯಿತು. ಸೌತ್ ವೆಸ್ಟರ್ನ್ ರೈಲ್ವೆ ಮಜ್ದೂರ್ ಯೂನಿಯನ್ ಕಾರ್ಯದರ್ಶಿ ಪ್ರಭು ಕುಮಾರ್ ಮಾತನಾಡಿ ಎಸ್ ಡಬ್ಲ್ಯೂ ಆರ್ ಮಜ್ದೂರ್ ಯೂನಿಯನ್ ವತಿಯಿಂದ 2004ರ ನಂತರ ನೇಮಕಾತಿಯಾದ ಎಲ್ಲಾ ರೈಲ್ವೆ ಕಾರ್ಮಿಕರಿಗೆ ಹೊಸ ಪೆನ್ಷನ್ ಪದ್ಧತಿಯನ್ನು ರದ್ದು ಮಾಡಿ ಹಳೆ ಪೆನ್ಷನ್ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಉಪಸತ್ಯಾಗ್ರವನ್ನು ಮಾಡುತ್ತಿದ್ದೇವೆ.
ಹೊಸ ಪೆನ್ಷನ್ ಪದ್ಧತಿಯಲ್ಲಿ ನೌಕರರಿಗೆ ಪೆನ್ಷನ್ ಪದ್ಧತಿಯಲ್ಲಿ ವ್ಯತ್ಯಾಸ ಆಗಿರುವುದರಿಂದ ನಾವುಗಳು ಹಳೆ ಪೆನ್ಷನ್ ಪದ್ಧತಿಯನ್ನು ಜಾರಿಗೊಳಿಸಬೇಕೆಂದು ಈಗಾಗಲೇ ನಮ್ಮ ರಾಜ್ಯಮಟ್ಟದ ನಾಯಕರುಗಳು ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದ್ದರು ಪ್ರಯೋಜನ ಆಗಿಲ್ಲ ಹಾಗಾಗಿ ಈಗ ಉಪಾಸತ್ಯಾಗ್ರವನ್ನು ಮಾಡುತ್ತಿದ್ದು ಸರದಿ ರೀತಿಯಲ್ಲಿ ಉಪವಾಸ ಸತ್ಯಾಗ್ರಹವನ್ನು ಬೆಳಗ್ಗೆ 9:00 ರಿಂದ ಸಂಜೆ ಐದರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದೇವೆ.
ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಮಜ್ದೂರ್ ಯೂನಿಯನ್ ಅರಸೀಕೆರೆ ಶಾಖೆಯ ಅಧ್ಯಕ್ಷ ಆಲ್ಬರ್ಟ್ ಅನಿಲ್, ಓಪನ್ ಲೈನ್ ಶಾಖೆಯ ಅಧ್ಯಕ್ಷ ರಾಘವೇಂದ್ರ ಕೆ ಎಸ್ ಖಜಾಂಚಿ ಶಿವಶಂಕರ್, ಶಶಿಧರ್ ಕುಮಾರ್, ಶೇಷಾದ್ರಿ ಗಣೇಶ್ ವಿನಯ್ ಕುಮಾರ್ ಹರಿ ಮೋಹನ್ ಮೀನಾ ದಯಾನಂದ್ ಮುಂತಾದವರು ಭಾಗವಹಿಸಿದ್ದರು
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?