ಮಂಗಳೂರು: ಮಂಜೇಶ್ವರ ಕಡಪ್ಪುರಂ ನಿವಾಸಿ ಖಾದರ್ (ಕಾಯಿಂಚ) ಎಂಬವರು ಇಂದು ಬೆಳಿಗ್ಗೆ ಮಂಗಳೂರಿನ ತಾರಾ ಕ್ಲಿನಿಕ್ ನಲ್ಲಿ ನಿಧನ ಹೊಂದಿದ್ದು, ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯ ಗೋದಾಮೊಂದರಲ್ಲಿ ಇರಿಸಿ ಅವಮಾನಿಸಲಾಗಿದೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದ ಕಾರಣ ಕಳೆದ ಒಂದು ವಾರದಿಂದ ಮಂಗಳೂರಿನ ತಾರಾ ಕ್ಲಿನಿಕ್ ನಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಯಿಞ್ಞಿ ಎಂಬವರು ನೆರೆ ರಾಜ್ಯ ಕೇರಳದ ಗಡಿನಾಡು ಮಂಜೇಶ್ವರ ಕಡಪ್ಪುರಂ ನಿವಾಸಿಯಾಗಿದ್ದಾರೆ.
ಮೃತ ಶರೀರವನ್ನು ಅವಮಾನಿಸಿದ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ವಿಚಾರಿಸಿದಾಗ “ಇಲ್ಲಿ ಇಷ್ಟೇ ಸೌಕರ್ಯ ಇರುವುದು, ಬೇಕಾದರೆ ಕೊಂಡೊಯ್ಯಿರಿ” ಎಂಬ ಉಡಾಫೆಯ ಉತ್ತರವನ್ನು ನೀಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಇಂತಹಾ ಅಮಾನವೀಯ ಕೃತ್ಯ ನಡೆದಿರುವುದಕ್ಕೆ ಕನ್ನಡಿಗರು ತಲೆತಗ್ಗಿಸುವಂತಾಗಿದೆ.
ಕೇರಳದ ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮುಂತಾದ ಜಿಲ್ಲೆಗಳ ಬಹುತೇಕ ಮಂದಿ ಕರ್ನಾಟಕದ ಮಂಗಳೂರಿನ ವಿವಿಧ ಆಸ್ಪತ್ರೆಗಳನ್ನು ಆಶ್ರಯಿಸುತ್ತಿದ್ದಾರೆ. ಮಂಗಳೂರಿನ ಕೆಲವು ಆಸ್ಪತ್ರೆಗಳು ಕೇವಲ ವ್ಯಾಪಾರಕ್ಕೆ ಮಾತ್ರ ಸೀಮಿತಗೊಂಡು ಕಾರ್ಯಾಚರಿಸುತ್ತಿರುವುದು ನಿಜಕ್ಕೂ ಖಂಡನೀಯ. ಈ ಬಗ್ಗೆ ಸಂಬಂಧಪಟ್ಟ ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ