ಮಂಗಳೂರು: ಮಂಜೇಶ್ವರ ಕಡಪ್ಪುರಂ ನಿವಾಸಿ ಖಾದರ್ (ಕಾಯಿಂಚ) ಎಂಬವರು ಇಂದು ಬೆಳಿಗ್ಗೆ ಮಂಗಳೂರಿನ ತಾರಾ ಕ್ಲಿನಿಕ್ ನಲ್ಲಿ ನಿಧನ ಹೊಂದಿದ್ದು, ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯ ಗೋದಾಮೊಂದರಲ್ಲಿ ಇರಿಸಿ ಅವಮಾನಿಸಲಾಗಿದೆ ಎಂದು ಮೃತ ವ್ಯಕ್ತಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಾರೋಗ್ಯದ ಕಾರಣ ಕಳೆದ ಒಂದು ವಾರದಿಂದ ಮಂಗಳೂರಿನ ತಾರಾ ಕ್ಲಿನಿಕ್ ನಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಯಿಞ್ಞಿ ಎಂಬವರು ನೆರೆ ರಾಜ್ಯ ಕೇರಳದ ಗಡಿನಾಡು ಮಂಜೇಶ್ವರ ಕಡಪ್ಪುರಂ ನಿವಾಸಿಯಾಗಿದ್ದಾರೆ.
ಮೃತ ಶರೀರವನ್ನು ಅವಮಾನಿಸಿದ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ವಿಚಾರಿಸಿದಾಗ “ಇಲ್ಲಿ ಇಷ್ಟೇ ಸೌಕರ್ಯ ಇರುವುದು, ಬೇಕಾದರೆ ಕೊಂಡೊಯ್ಯಿರಿ” ಎಂಬ ಉಡಾಫೆಯ ಉತ್ತರವನ್ನು ನೀಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಗಳೂರಿನ ಆಸ್ಪತ್ರೆಯಲ್ಲಿ ಇಂತಹಾ ಅಮಾನವೀಯ ಕೃತ್ಯ ನಡೆದಿರುವುದಕ್ಕೆ ಕನ್ನಡಿಗರು ತಲೆತಗ್ಗಿಸುವಂತಾಗಿದೆ.
ಕೇರಳದ ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮುಂತಾದ ಜಿಲ್ಲೆಗಳ ಬಹುತೇಕ ಮಂದಿ ಕರ್ನಾಟಕದ ಮಂಗಳೂರಿನ ವಿವಿಧ ಆಸ್ಪತ್ರೆಗಳನ್ನು ಆಶ್ರಯಿಸುತ್ತಿದ್ದಾರೆ. ಮಂಗಳೂರಿನ ಕೆಲವು ಆಸ್ಪತ್ರೆಗಳು ಕೇವಲ ವ್ಯಾಪಾರಕ್ಕೆ ಮಾತ್ರ ಸೀಮಿತಗೊಂಡು ಕಾರ್ಯಾಚರಿಸುತ್ತಿರುವುದು ನಿಜಕ್ಕೂ ಖಂಡನೀಯ. ಈ ಬಗ್ಗೆ ಸಂಬಂಧಪಟ್ಟ ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ