ನವದೆಹಲಿ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಆಯುಕ್ತರನ್ನು ನೇಮಿಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಅಮಾನತುಗೊಳಿಸಿದೆ.
ಶಾಹಿ ಈದ್ಗಾ ಮಸೀದಿ ಸಂಕೀರ್ಣದಲ್ಲಿ ಯಾವುದೇ ಸಮೀಕ್ಷೆ ನಡೆಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ‘ಹೈಕೋರ್ಟಿನಲ್ಲಿ ವಿಚಾರಣೆ ನಡೆಯಲಿದೆ. ಆದರೆ, ಕಮಿಷನರ್ ನೇಮಕಕ್ಕೆ ಮಧ್ಯಂತರ ತಡೆ ನೀಡಲಾಗುವುದು’ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಪ್ರಾಥಮಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಕಳೆದ ತಿಂಗಳು ನೀಡಿದ್ದ ಅನುಮತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ಇದೀಗ ತಡೆ ನೀಡಿದೆ.
ಈದ್ಗಾ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟಿನಲ್ಲಿ ಹತ್ತಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಭಗವಾನ್ ಕೃಷ್ಣನ ಜನ್ಮಸ್ಥಳದ 13.37 ಎಕರೆ ಪ್ರದೇಶದಲ್ಲಿ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ ಎಂದು ಕೆಲವರು ಪ್ರತಿಪಾದಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್