ಮಂಗಳೂರು, ಜ.17: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಏಕವಚನದಲ್ಲಿ ನಿಂದಿಸಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿಯನ್ನು ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಬಂಧಿತ ಆರೋಪಿ. ಈತ 12 ವರ್ಷದಿಂದ ಸುರತ್ಕಲ್ ನಲ್ಲಿ ವಾಸವಾಗಿದ್ದಾನೆ.
ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿತ್ತಿರೋ ಆರೋಪಿ ಅನಿಲ್ ಕುಮಾರ್, ಕೆಟ್ಟ ಪದಗಳಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟದ್ದ. ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್ಎಸ್ಯುಐ ದೂರು ಸ್ವೀಕರಿಸಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ CR.6/24, U/S 153A, 505(I)(C) IPC ಸಕ್ಷನ್ 504 ಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಪಡಿತರ ಚೀಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದ ಹಿನ್ನೆಲೆ ಕೋಪಗೊಂಡ ಯುವಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಿದ್ದ. ಹೀಗಾಗಿ ಈ ಸಂಬಂಧ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ