ಪರಂಪರೆಯ ಪ್ರತಿನಿಧಿಗಳಾಗೋಣ ಎಂಬ ಶೀರ್ಷಿಕೆಯೊಂದಿಗೆ SYS ಕರ್ನಾಟಕ ತನ್ನ 30ನೇ ವಾರ್ಷಿಕ ಮಹಾ ಸಮ್ಮೇಳನವನ್ನು ದಿನಾಂಕ 24/1/2024ನೇ ಬುಧವಾರದಂದು ಮಂಗಳೂರು ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್ ಮೈದಾನದಲ್ಲಿ ನಡೆಸಲಾಗುತ್ತಿದೆ.
ಪ್ರಸ್ತುತ ಸಮ್ಮೇಳನದ ಅಂಗವಾಗಿ ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಬೃಹತ್ ಇಸಾಬ ರ್ಯಾಲಿ ನಡೆಯಲಿದೆ.
ಅಪರಾಹ್ನನ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಇಂಡ್ಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ಕರ್ನಾಟಕ ಮುಖ್ಯಮಂತ್ರಿ ಶ್ರೀಮಾನ್ ಸಿದ್ದರಾಮಯ್ಯ ಸೇರಿದಂತೆ ಧಾರ್ಮಿಕ ಸಾಮಾಜಿಕ ರಾಜಕೀಯ ನಾಯಕರುಗಳು ಭಾಗವಹಿಸಲಿದ್ದಾರೆ.
ಸುನ್ನೀ ಸಂಘ ಕುಟುಂಬದ ಎಲ್ಲಾ ನಾಯಕರುಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಹಾ ಸಮ್ಮೇಳನವನ್ನು ಯಶಸ್ವಿಗಳಿಸಲು SYS ಕೊಡಗು ಜಿಲ್ಲಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.