ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಅಬುಧಾಬಿ ನಡೆಸುವ ದಾರುಲ್ ಅಮಾನ್ ವಸತಿ ನಿಲಯ ಯೋಜನೆಯ ನಾಲ್ಕನೇ ಮನೆಯ ಹಸ್ತಾಂತರವು ಫೆ. 3 ಶನಿವಾರ ಬೆಳ್ತಂಗಡಿ ತಾಲೂಕಿನ ಬದ್ಯಾರಿನಲ್ಲಿ ನಡೆಯಲಿದೆ.ದಶಮಾನೋತ್ಸವ ಸಂಭ್ರಮಿಸುತ್ತಿರುವ ಕೆಸಿಎಫ್ ವಿವಿಧ ಯೋಜನೆಗಳ ಮುಖಾಂತರ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸುತ್ತಿರುವ ಸಂಘಟನೆಯ ಹಿರಿಮೆಗೆ ದಾರುಲ್ ಅಮಾನ್ ನೂತನ ವಸತಿಯು ಗರಿಯಾಗಿದೆ.



ಯುಎಇ ರಾಜಧಾನಿ ಅಬುಧಾಬಿಯಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಂದ (ಕೆಸಿಎಫ್ ಕಾರ್ಯಕರ್ತರು) ನಡೆಸಲ್ಪಡುವ ಕರುಣೆಯ ನೆರಳು ಯೊಜನೆಯ ದಾರುಲ್ ಅಮಾನ್ ವಸತಿಯ ನಾಲ್ಕನೇ ಫಲಾನುಬಾವಿಯಾಗಿ ಬೆಳ್ತಂಗಡಿ ತಾಲೂಕಿನ ಬದ್ಯಾರು ನಿವಾಸಿಯನ್ನು ಆಯ್ಕೆ ಮಾಡಲಾಗಿತ್ತು. ಇದೀಗ ವಸತಿಯ ಕಾಮಗಾರಿಯೂ ಸಂಪೂರ್ಣವಾಗಿದ್ದು, ಉಧ್ಘಾಟನೆಗೆ ಸಜ್ಜಾಗಿದೆ.
ಫೆ. 3 ರಂದು ನಡೆಯಲಿರುವ ಉಧ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷ ಹಝ್ರತ್ ಫಾಝಿಲ್ ರಝ್ವಿ, ಮಲ್ಜಹ್ ವಿಧ್ಯಾ ಸಂಸ್ಥೆಯ ರುವಾರಿ ಜಲಾಲುದ್ದೀಬ್ ತಂಙಳ್, ಮನ್ಶರ್ ಸಂಸ್ಥೆಯ ರುವಾರಿ ಉಮರ್ ಅಸ್ಸಖಾಫ್ ತಂಙಳ್, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಲ್ ಸುಫ್ಯಾನ್ ಸಖಾಫಿ, ಎಸ್.ವೈ.ಎಸ್ ರಾಜ್ಯ ನಾಯಕರಾದ ಜಿ.ಎಂ ಕಾಮಿಲ್ ಸಖಾಫಿ, ಎಸ್.ಪಿ ಹಂಝ ಸಖಾಫಿ, ಮೆಹ್ಬೂಬ್ ಸಖಾಫಿ, ಹಫೀಲ್ ಸ ಅದಿ ಕೆಸಿಎಫ್ ಅಬುಧಾಬಿ ಝೋನ್ ನಾಯಕರಾದ ಹಸೈನಾರ್ ಅಮಾನಿ, ರಝಾಕ್ ಹಾಜಿ ಜೆಲ್ಲಿ ಹಾಗೂ ಹಕೀಂ ತುರ್ಕಳಿಕೆ ನವಾಜ್ ಹಾಜಿ ಕೊಟೆಕಾರ್ ಉಮ್ಮರ್ ಈಶ್ವರಮಂಗಿಲ NK ಸಿದ್ದೀಕ್ ಅಳಿಕೆ ಸೇರಿದಂತೆ ಸ್ಥಳೀಯ ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ ಎಂದು ಸಂಘಟನೆಯ ಸದಸ್ಯರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ