ಡಿ.ಕೆ.ಎಸ್.ಸಿ. ಬತ್ತಾ (ರಿಯಾದ್) ಸಮಿತಿಯ ವಾರ್ಷಿಕ ಮಹಾಸಭೆಯು ದಿನಾಂಕ 01-12-2024ರ ಗುರುವಾರ ಅಸ್ತ ಶುಕ್ರವಾರ ರಾತ್ರಿ ಸಮಿತಿಯ ಅಧ್ಯಕ್ಷರಾದ ಜನಾಬ್ ದಾವೂದ್ ಕಂದಕ್ ಇವರ ಬತ್ತಾದಲ್ಲಿರುವ ನಿವಾಸದಲ್ಲಿ
ದಾವೂದ್ ಕಂದಕ್ ರವರ ನೇತೃತ್ವದಲ್ಲಿ ಜರಗಿತು.
ಮುಸ್ತಫಾ ಸಅದಿ ಸೂರಿಕುಮೇರು ಇವರ ದುಆದ ಮೂಲಕ ಶುಭಾರಂಭಗೊಂಡ ಸಭೆಯಲ್ಲಿ ಅಬ್ದುಲ್ ಅಝೀಝ್ ಮದನಿ ಕೊಕ್ಕಡ ಖಿರಾಅತ್ ಪಾರಾಯಣಗೈದರು. ಡಿ.ಕೆ.ಎಸ್.ಸಿ. ಕೇಂದ್ರ ಸಮಿತಿಯ ಕೋಶಾಧಿಕಾರಿ ದಾವೂದ್ ಕಜಮಾರ್ ಸಭೆಯನ್ನು ಉದ್ಘಾಟಿಸಿದರು. ಸಮಿತಿಯ ಕೋಶಾಧಿಕಾರಿ ಜನಾಬ್ ಹುಸೈನ್ ಕೃಷ್ಣಾಪುರ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿ ಸಭೆಯ ಅಂಗೀಕಾರವನ್ನು ಪಡೆದುಕೊಂಡರು.
ರಿಯಾದ್ ಝೋನ್ ಅಧ್ಯಕ್ಷರಾದ ಜನಾಬ್ ಅಬ್ದುಲ್ ಅಝೀಝ್ ಬಜ್ಪೆಯವರ ನೇತೃತ್ವದಲ್ಲಿ 2024-2025ರ ಸಾಲಿಗೆ ಈ ಕೆಳಗಿ ಸುದೃಢವಾದ ನೂತನ ಸಮಿತಿಯನ್ನು ರಚಿಸಲಾಯಿತು.
ಅಧ್ಯಕ್ಷರಾಗಿ ಕಬೀರ್ ಕಂದಕ್, ಪ್ರಧಾನ ಕಾರ್ಯದರ್ಶಿಯಾಗಿ ಶಾಫಿ ಕಾನ, ಕೋಶಾಧಿಕಾರಿಯಾಗಿ ಹುಸೈನ್ ಕೃಷ್ಣಾಪುರ, ಉಪಾದ್ಯಕ್ಷರುಗಳಾಗಿ ಖಲೀಲ್ ಮಂಜೇಶ್ವರ ಹಾಗೂ ಅಝೀಝ್ ಪೆರ್ನೆ, ಕಾರ್ಯದರ್ಶಿಯಾಗಿ ಶಮೀರ್ ಸಕ್ಲೇಶಪುರ, ಸಲಹೆಗಾರರಾಗಿ ಫಾರೂಕ್ ಬನ್ನೂರು ಹಾಗೂ ಅಬ್ದುಲ್ ಅಝೀಝ್ ಕಾಟಿಪಳ್ಳ, ಸಂಚಾಲಕರಾಗಿ ಇಬ್ರಾಹಿಂ ಮಂಜೇಶ್ವರ, ನೌಫಲ್ ಮನಲ್, ಮುದಸ್ಸಿರ್ ಕೃಷ್ಣಾಪುರ ಹಾಗೂ ಅಫ್ಝಲ್ ಕೆ.ಸಿ.ರೋಡ್ ಆಯ್ಕೆಗೊಂಡರು.
ಮುಖ್ಯ ಅತಿಥಿಗಳಾಗಿ ಸಭೆಯಲ್ಲಿ ಹಾಜರಿದ್ದ ಇಸ್ಮಾಯಿಲ್ ಕನ್ನಂಗಾರ್, ಫಾರೂಕ್ ಬನ್ನೂರು, ಅಝೀಝ್ ಕಾಟಿಪಳ್ಳ ಇವರು ಮಾತನಾಡಿ ನೂತನ ಸಭೆಗೆ ಶುಭಹಾರೈಸಿದರು.
ನೂತನ ಸಮಿತಿಗೆ ಆಯ್ಕೆಗೊಂಡ ಅಧ್ಯಕ್ಪ, ಪ್ರಧಾನ ಕಾರ್ಯದರ್ಶಿ, ಕೋಶಾಧಿಕಾರಿಗಳಾದ ಕಬೀರ್ ಕಂದಕ್, ಶಾಫಿ ಕಾನ ಹಾಗೂ ಹುಸೈನ್ ಕೃಷ್ಣಾಪುರ ಸಭಿಕರನ್ನುದ್ದೇಶಿಸಿ ಮಾತನಾಡಿ ಮುಂದಿನ ವರ್ಷದಲ್ಲಿ ಎಲ್ಲರ ಸಹಕಾರದೊಂದಿಗೆ ಅತ್ಯುತ್ತಮ ನಿರ್ವಹಣೆಯ ಭರವಸೆಯನಿತ್ತರು.
ನೂತನ ಜತೆಕಾರ್ಯದರ್ಶಿ ಶಮೀರ್ ಸಕ್ಲೇಶಪುರ ಧನ್ಯವಾದಗೈದು ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಉಚ್ಚಿಲ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ