ಬಂಟ್ವಾಳ: ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ 2024-25ರ ನೂತನ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಜಬ್ಬಾರ್ ಮಾರಿಪಳ್ಳ ರವರು ಪುನರಾಯ್ಕೆಯಾಗಿದ್ದಾರೆ.
ಬಿ.ಸಿ ರೋಡ್ ತಲಪಾಡಿ ಡೈಮಂಡ್ ಕ್ಯಾಂಪಸ್ ನಲ್ಲಿ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ ಸಲಹೆಗಾರ ಹನೀಫ್ ಖಾನ್ ಕೋಡಾಜೆ ರವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನಂತರ ಮಾತಾಡಿದವರು ಕಳೆದ 11 ವರ್ಷಗಳಿಂದ ಸಂಸ್ಥೆಯು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಆರೋಗ್ಯ, ಶಿಕ್ಷಣ, ಮೂಲಸೌಕರ್ಯಗಳನ್ನು ಒದಗಿಸುತ್ತಾ ಬಂದಿದೆ. ಅಲ್ಲದೇ ಹಿಜಾಮ, ಬೃಹತ್ ರಕ್ತದಾನ ಶಿಬಿರ, ಡ್ರಗ್ಸ್ ಮುಕ್ತ ಜನ ಜಾಗೃತಿ ಅಭಿಯಾನದಂತಹ ಕಾರ್ಯಕ್ರಮಗಳಲ್ಲಿ ಯಶಸ್ವಿಯನ್ನು ಕಂಡಿರುವುದು ಶ್ಲಾಘನ್ಯವಾಗಿದೆ ಎಂದುರು.
ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಸದಸ್ಯರಾದ ರಝಾಕ್ ಬಲ್ಲಾಳ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪದಾಧಿಕಾರಿಗಳ ವಿವರ ಇಂತಿವೆ.
ಸಲಹಾ ಸಮಿತಿ ಮುಖ್ಯಸ್ಥರಾಗಿ ಹನೀಫ್ ಖಾನ್ ಕೋಡಾಜೆ, ಅಬ್ದುಲ್ ಖಾದರ್ ಅರಫಾ, ಶಬೀರ್ ಕೆಂಪಿ, ಗೌರವಾಧ್ಯಕ್ಷರಾಗಿ ಎಸ್.ಎಂ ಬಾಷ, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಅರಫಾ, ರಝಾಕ್ ಬಲ್ಲಾಳ್, ಪ್ರಧಾನ ಕಾರ್ಯದರ್ಶಿಯಾಗಿ ಡೈಮಂಡ್ ಅಲ್ತಾಫ್ ಫರಂಗಿಪೇಟೆ, ಜೊತೆ ಕಾರ್ಯದರ್ಶಿಯಾಗಿ ಮಲಿಕ್ ಕುಂಪನಮಜಲು, ಆರೋಗ್ಯ ವಿಭಾಗದ ಕಾರ್ಯದರ್ಶಿ ಹಾಶೀರ್ ಪೇರಿಮಾರ್, ಶಿಕ್ಷಣ ವಿಭಾಗದ ಕಾರ್ಯದರ್ಶಿ ಇಕ್ಬಾಲ್ ಅರಫಾ, ಕ್ರೀಡಾ ವಿಭಾಗ ಕಾರ್ಯದರ್ಶಿ ಗಪೂರ್ ಹಸನ್ ಪುಂಚಮೆ, ಮೂಲ ಸೌಕರ್ಯ ವಿಭಾಗದ ಕಾರ್ಯದರ್ಶಿ ಇಮ್ರಾನ್ ಮಾರಿಪಳ್ಳ, ಕೋಶಾಧಿಕಾರಿ ಮುಸ್ತಫ ಮೇಲ್ಮನೆ, ಸಂಘಟನಾ ಕಾರ್ಯದರ್ಶಿ ಸಲಾಂ ಸುಜೀರ್, ಸಂಚಾಲಕರಾಗಿ ಅಸೀಫ್ ಬಜಾಲ್ ಆಯ್ಕೆಯಾದರು.
ಕಾರ್ಯಕಾರಣಿ ಸಮಿತಿಯ ನೂತನ ಸದಸ್ಯರಾಗಿ ಅಸೀಫ್ ಮೇಲ್ಮನೆ, ಶಾಹುಲ್ ಹಮೀದ್, ಹಕೀಂ ಮಾರಿಪಳ್ಳ, ಹರ್ಷದ್ ವಳವೂರು, ಜಾಫರ್ ಟಿ. ಎಚ್, ಅಶ್ರಫ್ ಮಲ್ಲಿ, ಅನೀಸ್ ಮಾರಿಪಳ್ಳ, ರಿಯಾಝ್ ಕುಂಪನಮಜಲು ಆಯ್ಕೆಯಾದರು.
ಹಾಶೀರ್ ಪೇರಿಮಾರ್ ಸ್ವಾಗತಿಸಿದರು, ಸಲಾಂ ಸುಜೀರ್ ವಾರ್ಷಿಕ ವರದಿ ವಾಚಿಸಿದರು, ಡೈಮಂಡ್ ಅಲ್ತಾಫ್ ಧನ್ಯವಾದ ಸಲ್ಲಿಸಿದರು.




















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್