ಬೋಳಂತೂರು ನಾರಂಕೋಡಿ ತಾಜುಲ್ ಉಲಮಾ ಮದ್ರಸದಲ್ಲಿ ದಿನಾಂಕ:- 09 -02 -2024 ಶುಕ್ರವಾರ ಸಂಜೆ 4.30 ಕ್ಕೆ ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ಟಿ.ಯು ಮದರಸ ವಠಾರ ನಾರಂಕೋಡಿಯಲ್ಲಿ ನಡೆಯಲಿದೆ.
ಸಂಜೆ 4.30 ಕ್ಕೆ – ಶೈಖುನಾ ಬೊಳ್ಮಾರ್ ಅಬೂಬಕ್ಕರ್ ಮುಸ್ಲಿಯಾರ್ ಉಸ್ತಾದ್ ರವರ ನೇತೃತ್ವದಲ್ಲಿ ಮರ್ ಹೂಂ ಶೈಖುನಾ ಸುರಿಬೈಲ್ ಉಸ್ತಾದ್ ರವರ ಮಖ್ ಬರ ಝಿಯಾರತ್ ನಡೆಯಲಿದೆ.
ಸಂಜೆ 5 ಕ್ಕೆ- ಸುಲೈಮಾನ್ ಸಖಾಫಿ, ಖತೀಬರು ಬೋಳಂತೂರು ಇವರ ನೇತೃತ್ವದಲ್ಲಿ ತಾಜುಲ್ ಉಲಮಾ ಮೌಲಿದ್ ಮಜ್ಲಿಸ್ ನಡೆಯಲಿದೆ.
ಸಂಜೆ 7.00ಕ್ಕೆ ಹಮೀದ್ ಮದನಿ, ಸದರ್ ಮುಅಲ್ಲಿಂ ನಾರಂಕೋಡಿ ಇವರ ನೇತೃತ್ವದಲ್ಲಿ ಬದ್ರಿಯತ್ ಮಜ್ಲಿಸ್ ನಡೆಯಲಿದೆ.
ರಾತ್ರಿ ಗಂಟೆ 8 ಕ್ಕೆ ಅಸ್ಸಯ್ಯಿದ್ ನೂರುಸ್ಸಾದಾತ್ ಬಾಯಾರ್ ತಂಙಳ್ ರವರ ನೇತೃತ್ವದಲ್ಲಿ ಅನುಸ್ಮರಣಾ ಸಮ್ಮೇಳನ ನಡೆಯಲಿದೆ. ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಉದ್ಘಾಟಿಸಲಿದ್ದಾರೆ.
ಬಹು! ನೌಫಲ್ ಸಖಾಫಿ ಕಳಸ, ದ್ಸಿಕ್ರಾ ಮೂಡಬಿದ್ರೆ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಅಬ್ದುಲ್ಲಾ ನಾರಂಕೋಡಿಯವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಿ.ಹೆಚ್ ಮಹಮ್ಮದಲಿ ಸಖಾಫಿ ಅಶ್ ಅರಿಯ್ಯ ಇವರು ಪ್ರಾಸ್ತಾವಿಕ ಭಾಷಣವನ್ನು ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಿ.ಎಂ ಅಬೂಬಕ್ಕರ್ ಲತೀಫಿ ಎಣ್ಮೂರು, ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ, ಎಂ. ಎಸ್ ಮಹಮ್ಮದ್ , ಅಬ್ಬಾಸ್ ಅಲಿ ಬೋಳಂತೂರು, ಇಬ್ರಾಹೀಂ ನವಾಝ್ ಬಡಕಬೈಲ್, ಶಾಕೀರ್ ಬಡಕಬೈಲ್, ರಝಾಕ್ ಕುಕ್ಕಾಜೆ, ಲತೀಫ್ ಪರ್ತಿಪ್ಪಾಡಿ, ಯಾಕೂಬ್ ದಂಡೆಮಾರ್ , ಅನ್ಸಾರ್ ಬಿ.ಜಿ, ಹಾಗೂ ಅಶ್ರಫ್ ಸುರಿಬೈಲ್ ಇವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮದ್ರಸ ರಂಗದಲ್ಲಿ ಸುಮಾರು 51 ವರ್ಷ ಸೇವೆ ಸಲ್ಲಿಸಿದ ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ, ದಾರುಲ್ ಅಶ್ ಅರಿಯ್ಯ ವಿದ್ಯಾ ಸಂಸ್ಥೆಯ ಮೆನೇಜರ್ ಆಗಿ 22 ವರ್ಷಗಳಿಂದ ಸೇವೆಸಲ್ಲಿಸಿದ ಮುಹಮ್ಮದಲಿ ಸಖಾಫಿ ಉಸ್ತಾದ್, ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಾಕೂಬ್ ದಂಡೆಮಾರ್ ಹಾಗೂ ತಾಜುಲ್ ಉಲಮಾ ಮದ್ರಸದ ಹಿರಿಯ ಸದಸ್ಯರಾದ ಇಬ್ರಾಹೀಂ ನಾರಂಕೋಡಿಯವರನ್ನು ಸನ್ಮಾನಿಸಲಿದ್ದಾರೆ ಎಂದು ಸ್ವಾಗತ ಸಮಿತಿಯ ಕನ್ವೀನರ್ ಝಕರಿಯಾ ನಾರ್ಶ ಪ್ರಕಟನೆಗೆ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ