ಬೋಳಂತೂರು ನಾರಂಕೋಡಿ ತಾಜುಲ್ ಉಲಮಾ ಮದ್ರಸದಲ್ಲಿ ದಿನಾಂಕ:- 09 -02 -2024 ಶುಕ್ರವಾರ ಸಂಜೆ 4.30 ಕ್ಕೆ ತಾಜುಲ್ ಉಲಮಾ ಅನುಸ್ಮರಣೆ ಹಾಗೂ ಮೌಲಿದ್ ಮಜ್ಲಿಸ್ ಕಾರ್ಯಕ್ರಮವು ಟಿ.ಯು ಮದರಸ ವಠಾರ ನಾರಂಕೋಡಿಯಲ್ಲಿ ನಡೆಯಲಿದೆ.
ಸಂಜೆ 4.30 ಕ್ಕೆ – ಶೈಖುನಾ ಬೊಳ್ಮಾರ್ ಅಬೂಬಕ್ಕರ್ ಮುಸ್ಲಿಯಾರ್ ಉಸ್ತಾದ್ ರವರ ನೇತೃತ್ವದಲ್ಲಿ ಮರ್ ಹೂಂ ಶೈಖುನಾ ಸುರಿಬೈಲ್ ಉಸ್ತಾದ್ ರವರ ಮಖ್ ಬರ ಝಿಯಾರತ್ ನಡೆಯಲಿದೆ.
ಸಂಜೆ 5 ಕ್ಕೆ- ಸುಲೈಮಾನ್ ಸಖಾಫಿ, ಖತೀಬರು ಬೋಳಂತೂರು ಇವರ ನೇತೃತ್ವದಲ್ಲಿ ತಾಜುಲ್ ಉಲಮಾ ಮೌಲಿದ್ ಮಜ್ಲಿಸ್ ನಡೆಯಲಿದೆ.
ಸಂಜೆ 7.00ಕ್ಕೆ ಹಮೀದ್ ಮದನಿ, ಸದರ್ ಮುಅಲ್ಲಿಂ ನಾರಂಕೋಡಿ ಇವರ ನೇತೃತ್ವದಲ್ಲಿ ಬದ್ರಿಯತ್ ಮಜ್ಲಿಸ್ ನಡೆಯಲಿದೆ.
ರಾತ್ರಿ ಗಂಟೆ 8 ಕ್ಕೆ ಅಸ್ಸಯ್ಯಿದ್ ನೂರುಸ್ಸಾದಾತ್ ಬಾಯಾರ್ ತಂಙಳ್ ರವರ ನೇತೃತ್ವದಲ್ಲಿ ಅನುಸ್ಮರಣಾ ಸಮ್ಮೇಳನ ನಡೆಯಲಿದೆ. ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಉದ್ಘಾಟಿಸಲಿದ್ದಾರೆ.
ಬಹು! ನೌಫಲ್ ಸಖಾಫಿ ಕಳಸ, ದ್ಸಿಕ್ರಾ ಮೂಡಬಿದ್ರೆ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಅಬ್ದುಲ್ಲಾ ನಾರಂಕೋಡಿಯವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಿ.ಹೆಚ್ ಮಹಮ್ಮದಲಿ ಸಖಾಫಿ ಅಶ್ ಅರಿಯ್ಯ ಇವರು ಪ್ರಾಸ್ತಾವಿಕ ಭಾಷಣವನ್ನು ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಿ.ಎಂ ಅಬೂಬಕ್ಕರ್ ಲತೀಫಿ ಎಣ್ಮೂರು, ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ, ಎಂ. ಎಸ್ ಮಹಮ್ಮದ್ , ಅಬ್ಬಾಸ್ ಅಲಿ ಬೋಳಂತೂರು, ಇಬ್ರಾಹೀಂ ನವಾಝ್ ಬಡಕಬೈಲ್, ಶಾಕೀರ್ ಬಡಕಬೈಲ್, ರಝಾಕ್ ಕುಕ್ಕಾಜೆ, ಲತೀಫ್ ಪರ್ತಿಪ್ಪಾಡಿ, ಯಾಕೂಬ್ ದಂಡೆಮಾರ್ , ಅನ್ಸಾರ್ ಬಿ.ಜಿ, ಹಾಗೂ ಅಶ್ರಫ್ ಸುರಿಬೈಲ್ ಇವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮದ್ರಸ ರಂಗದಲ್ಲಿ ಸುಮಾರು 51 ವರ್ಷ ಸೇವೆ ಸಲ್ಲಿಸಿದ ಅಲ್ ಹಾಜಿ ಸುಲೈಮಾನ್ ಮುಸ್ಲಿಯಾರ್ ನಾರ್ಶ, ದಾರುಲ್ ಅಶ್ ಅರಿಯ್ಯ ವಿದ್ಯಾ ಸಂಸ್ಥೆಯ ಮೆನೇಜರ್ ಆಗಿ 22 ವರ್ಷಗಳಿಂದ ಸೇವೆಸಲ್ಲಿಸಿದ ಮುಹಮ್ಮದಲಿ ಸಖಾಫಿ ಉಸ್ತಾದ್, ಬೋಳಂತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಾಕೂಬ್ ದಂಡೆಮಾರ್ ಹಾಗೂ ತಾಜುಲ್ ಉಲಮಾ ಮದ್ರಸದ ಹಿರಿಯ ಸದಸ್ಯರಾದ ಇಬ್ರಾಹೀಂ ನಾರಂಕೋಡಿಯವರನ್ನು ಸನ್ಮಾನಿಸಲಿದ್ದಾರೆ ಎಂದು ಸ್ವಾಗತ ಸಮಿತಿಯ ಕನ್ವೀನರ್ ಝಕರಿಯಾ ನಾರ್ಶ ಪ್ರಕಟನೆಗೆ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್