ಭಟ್ಕಳ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ನ ರಾಜ್ಯಮಟ್ಟದ ಸಾಹಿತ್ಯೋತ್ಸ ಕಾರ್ಯಕ್ರಮ ಫೆ.9, 10, 11 ರಂದು ಭಟ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ತಿಳಿಸಿದ್ದಾರೆ.
ಅವರು ಗುರುವಾರ ಭಟ್ಕಳದಲ್ಲಿ ಪತ್ರಿಕಾಗೋಷ್ಟಿಯಲ್ಲಿ ರಾಜ್ಯಮಟ್ಟದ ಸಾಹಿತ್ಯೋತ್ಸವ ಹಾಗೂ ಸ್ಪರ್ಧಾ ಕಾರ್ಯಕ್ರಮದ ಮಾಹಿತಿ ನೀಡಿ ಮಾತನಾಡಿದರು.
ಪ್ರತಿಭಾವಂತ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿಯನ್ನು ತುಂಬಲು ಎಸ್ಸೆಸ್ಸೆಫ್ ಯುನಿಟ್, ಸೆಕ್ಟರ್, ಡಿವಿಷನ್ ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಈಗಾಗಲೇ ಯಶಸ್ವಿಯಾಗಿ ನಡೆಸಿದ್ದು ಅದರಲ್ಲಿ ಪ್ರಥಮ ಸ್ಥಾನವನ್ನು ಪಡೆದ 26 ಜಿಲ್ಲೆಗಳ ಪ್ರತಿಭೆಗಳು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಎಂಟು ವೇದಿಕೆಗಳಲ್ಲಿ 120 ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿದ್ದು ರಾಜ್ಯದ ವಿವಿಧ ಕಡೆಗಳಿಂದ 1500 ಪ್ರತಿಭೆಗಳು ಭಾಗವಹಿಸಲಿದ್ದಾರೆ.
ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಭಟ್ಕಳದ ಪ್ರಮುಖ ದರ್ಗಾಗಳಲ್ಲಿ ಝಿಯಾರತ್ನೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಸಂಜೆ 4 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಉದ್ಘಾಟನಾ ಸಮಾರಂಭ, ಆಧ್ಯಾತ್ಮಿಕ ಸಂಗಮ ಮೊದಲ ದಿನ ನಡೆಯಲಿದ್ದು ಮೂರು ದಿನಗಳ ಕಾರ್ಯಕ್ರಮ ರವಿವಾರ ಮಧ್ಯಾಹ್ನ 12 ಗಂಟೆಗೆ ಸಮಾರೋಪಗೊಳ್ಳಲಿದೆ.
ಸಯ್ಯಿದ್ ಆಟಕ್ಕೋಯ ತಂಙಳ್ ಕುಂಬೋಳ್ ರವರು ಆಧ್ಯಾತ್ಮಿಕ ಸಂಗಮಕ್ಕೆ ನೇತೃತ್ವ ನೀಡಲಿದ್ದು ಖ್ಯಾತ ಚಿಂತಕ, ಬರಹಗಾರ ಡಾ ಹೆಚ್ ಎಸ್ ಸತ್ಯನಾರಾಯಣ ಚಿಕ್ಕಮಗಳೂರು ರವರು ಸಭೆಯನ್ನು ಉದ್ಘಾಟಿಸಲಿದ್ದಾರೆ. ಕಲ್ಲಿಕೋಟೆಯ ಮರ್ಕಝ್ ವಿಶ್ವ ವಿದ್ಯಾನಿಲಯದ ವೈಸ್ ಚಾನ್ಸೆಲರ್ ಅಡ್ವೋಕೇಟ್ ಡಾ ಹುಸೈನ್ ಸಖಾಫಿ ಚುಳ್ಳಿಕ್ಕೋಡ್ ಮುಖ್ಯ ಭಾಷಣ ಮಾಡಲಿದ್ದಾರೆ.
ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್, ಉ.ಕ.ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ, ಸಯ್ಯಿದ್ ಅಲವಿ ಅಲ್ ಬುಖಾರಿ ಕರ್ಕಿ ಹಾಗೂ ಹಲವಾರು ಗಣ್ಯರು ಭಾಗವಹಿಸಲಿದ್ದು. ಪ್ರಮುಖ ವಿದ್ವಾಂಸ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಈ ವರ್ಷದ ಸುನ್ನೀ ಸಾಹಿತ್ಯ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ.
ಎಸ್.ಎಸ್.ಎಫ್ ಸುನ್ನೀ ಸಾಹಿತ್ಯ ಪ್ರಶಸ್ತಿಗೆ ಸ್ವಾಲಿಹ್ ತೋಡಾರ್ ಆಯ್ಕೆ :
ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ವತಿಯಿಂದ ಪ್ರತಿ ಎರಡು ವರ್ಷಕ್ಕೊಮ್ಮೆ ನೀಡುವ ಸುನ್ನೀ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಬರಹಗಾರ ಸ್ವಾಲಿಹ್ ತೋಡಾರ್ ರವರನ್ನು ಆಯ್ಕೆ ಮಾಡಲಾಗಿದೆ.
ಸುನ್ನೀ ಸಾಹಿತ್ಯ ಕ್ಷೇತ್ರಕ್ಕೆ ಬಹಳಷ್ಟು ಪುಸ್ತಕಗಳನ್ನು ಬರೆದು ಸಮರ್ಪಿಸಿದ್ದಲ್ಲದೆ, ಇತ್ತೀಚೆಗೆ ಬರೆದ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ಎಂಬ ಅತ್ಯಮೂಲ್ಯ ಬೃಹತ್ ಗ್ರಂಥವನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ. ಎಸ್ಸೆಸ್ಸೆಫ್ ರಾಜ್ಯ ಸಮಿತಿ ನೇಮಕ ಮಾಡಿದ ಎಸ್ ಪಿ ಹಂಝ ಸಖಾಫಿ, ಅಬ್ದುಲ್ ಹಮೀದ್ ಬಜ್ಪೆ, ಕೆಎಂ ಅಬೂಬಕ್ಕರ್ ಸಿದ್ದೀಕ್, ಜಿಎಂ ಕಾಮಿಲ್ ಸಖಾಫಿ ರವರನ್ನು ಒಳಗೊಂಡ ಆಯ್ಕೆ ಸಮಿತಿ ಸ್ವಾಲಿಹ್ ತೋಡಾರ್ ರವರನ್ನು ಆಯ್ಕೆ ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಯ್ಯಿದ್ ಅಲವಿ ಅಲ್ ಬುಖಾರಿ, ಕರ್ಕಿ(ಚೆಯರ್ಮನ್, ಸಾಹಿತ್ಯೋತ್ಸವ ಸ್ವಾಗತ ಸಮಿತಿ), ಮುಹಮ್ಮದ್ ಸಫ್ವಾನ್ ಚಿಕ್ಕಮಗಳೂರು, (ಪ್ರ.ಕಾರ್ಯದರ್ಶಿ, ಎಸ್ಸೆಸ್ಸೆಫ್ ಕರ್ನಾಟಕ), ಆರಿಫ್ ಸಅದಿ, ಭಟ್ಕಳ, (ಕನ್ವೀನರ್, ಸಾಹಿತ್ಯೋತ್ಸವ ಸ್ವಾಗತ ಸಮಿತಿ), ಕೆ.ಕೆ ಆಶ್ರಫ್, ಸಖಾಫಿ ಹರಿಹರ, (ಚೆಯರ್ಮನ್, ಸಾಹಿತ್ಯೋತ್ಸವ ಸಮಿತಿ), ಮುಜೀಬ್ ಕೊಡಗು, (ಕಾರ್ಯದರ್ಶಿ, ಎಸ್ಸೆಸ್ಸೆಫ್ ಕರ್ನಾಟಕ), ಮುನೀರ್ ಅಹ್ಮದ್, ವೈಸ್ ಚೆಯರ್ಮನ್, ಸಾಹಿತ್ಯೋತ್ಸವ ಸ್ವಾಗತ ಸಮಿತಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ