ಬಂಟ್ವಾಳ: ಹನಫಿ ಸುನ್ನಿಗಳಿಗಾಗಿ ಯಾರನ್ನೂ ಖಾಝಿಯಾಗಿ ನೇಮಕ ಮಾಡಿಲ್ಲ, ಖಾಝಿ ಸಂಬಂಧಿತ ಯಾವುದೇ ರೀತಿಯ ಗುಮಾನಿಗಳಿಗೆ ಹನಫಿ ಸುನ್ನಿಗಳು ಬೆಲೆಕೊಡಬಾರದು. ಯಾರಾದರೂ ಹೇಳಿಕೆ ಕೊಟ್ಟಿದ್ದರೆ ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ನ ರಾಜ್ಯಾಧ್ಯಕ್ಷ ಕಾವಳಕಟ್ಟೆ ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ರವರು ಹೇಳಿದ್ದಾರೆ.
ಅವರು ಕರ್ನಾಟಕ ರಾಜ್ಯ ಅಮ್ಜದೀಸ್ ಅಸೋಸಿಯೇಷನ್ ನ ಕಾವಳಕಟ್ಟೆ ಅಲ್ ಖಾದಿಸಾ ವಿದ್ಯಾಸಂಸ್ಥೆ ಯಲ್ಲಿ ನಡೆದ ಬೃಹತ್ ಅಮ್ಜದಿ ಸಂಗಮವನ್ನು ಉದ್ಘಾಟಿಸಿ ಮಾತನಾಡುತಿದ್ದರು.
ಇತ್ತೀಚೆಗೆ ಹನಫಿಗಳಿಗಾಗಿ ಓರ್ವ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿ ಮಂಗಳೂರಿನ ಮುಖಂಡರೊಬ್ಬರು ಹನಫಿಗಳ ಖಾಝಿ ಎಂಬುದಾಗಿ ಹೇಳಿಕೆ ನೀಡಿದ್ದರು, ಇದರ ವಿರುದ್ಧ ಕಾವಳಕಟ್ಟೆ ಹಝ್ರತ್ ರವರು ಪ್ರತಿಕ್ರಿಯೆ ನೀಡಿದ್ದಾರೆ. ಅಂತಹ ವೈಯಕ್ತಿಕ ನಿಲುವಿಗೆ ಹನಫಿ ಸುನ್ನಿಗಳು ಬೆಲೆ ಕಲ್ಪಿಸುವುದಿಲ್ಲ ಎಂದು ಹಝ್ರತ್ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎ. ಕೆ. ರಝಾ ಅಮ್ಜದಿ ಉಪ್ಪಿನಂಗಡಿ ವಹಿಸಿದ್ದರು. ಅಮ್ಜದೀಸ್ ನ ರಾಜ್ಯ ನಿರ್ದೇಶಕ ಯೂಸುಫ್ ರಝಾ ಅಮ್ಜದಿ ದಾವಣಗೆರೆ, ಡಾ. ಹನೀಫ್ ಅಮ್ಜದಿ ಬೆಳ್ಳಾರೆ ಪ್ರಾಸ್ತಾವಿಕ ಭಾಷಣ ಮಾಡಿದರು.
ವೇದಿಕೆಯಲ್ಲಿ ಅಝೀಝ್ ಅಮ್ಜದಿ, ನಝೀರ್ ಅಮ್ಜದಿ ಮಾಣಿ, ಬಿಲಾಲ್ ಅಮ್ಜದಿ ಬೆಳಗಾವಿ, ರಫೀಕ್ ಅಮ್ಜದಿ ಮಾವಿನಕಟ್ಟೆ, ಇರ್ಷಾದ್ ಅಮ್ಜದಿ ಮಠ, ಅಬ್ದುಲ್ ಖಾದರ್ ಅಮ್ಜದಿ ಗೋವಿಂದೂರು, ಆಸಿಫ್ ಅಮ್ಜದಿ , ಉಮರುಲ್ ಫಾರೂಕ್ ರಝಾ ಅಮ್ಜದಿ ಕುಂಡಡ್ಕ, ಅಶ್ರಫ್ ಅಮ್ಜದಿ ಮಲಾರ್ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯಅಮ್ಜದೀಸ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಹಾಫಿಝ್ ಮುಈನ್ ರಝಾ ಅಮ್ಜದಿ ಉಳ್ಳಾಲ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ