ವಿಟ್ಲ: ಸುನ್ನೀ ಸೆಂಟರ್ ಕೊಡಂಗಾಯಿ ಇದರ ನೂತನ ಮಸ್ಜಿದ್ ಉದ್ಘಾಟನೆ ಫೆಬ್ರವರಿ 15 ಗುರುವಾರ ನಾಳೆ ಸಾಯಂಕಾಲ 4:00 ಗಂಟೆಗೆ ಸರಿಯಾಗಿ ಸಮಸ್ತ ಕೇರಳ ಜಂಇಯತುಲ್ ಉಲಮಾ ಉಪಾಧ್ಯಕ್ಷರಾದ ಕುಂಬೋಳ್ ಸೈಯದ್ ಆಟಕೋಯ ತಂಙಳ್ ರವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಖುನಾ ವಾಲೆಮುಂಡೋವ್ ಉಸ್ತಾದ್ ನಿರ್ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಸೈಯದ್ ಇಬ್ರಾಹಿಂ ಪುಕುಂಞ್ಞ ತಂಙಳ್ ,ಸಯ್ಯಿದ್ ಶಿಹಾಬುದ್ದೀನ್ ತಂಙಳ್ , ಸಯ್ಯಿದ್ ಶಮೀಮ್ ತಂಙಳ್ ದಾರುನ್ನಜಾತ್ ಅಸ್ಲಂ ಹಾಜಿ ಮುಹಮ್ಮದ್ ಮುಸ್ಲಿಯಾರ್ ಇಮಾಂ ದುಬೈ,ಕನ್ಯಾನ ಇಬ್ರಾಹಿಂ ಮುಸ್ಲಿಯರ್ ,ಸಿರಾಜುದ್ದೀನ್ ಸಖಾಫಿ ಮತ್ತು
ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ .ರವೀಶ್ ಶೆಟ್ಟಿ ಕಾರ್ಕಳ ಎಂ ಎಸ್ ಮುಹಮ್ಮದ್ ನಾಗೇಶ್ ಶೆಟ್ಟಿ ಸಂದೇಶ್ ಶೆಟ್ಟಿ ಹಾಗೂ ಹಲವು ಸಾಮಾಜಿಕ ಧಾರ್ಮಿಕ ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಕೊನೆಯಲ್ಲಿ ತಬರ್ರುಕ್ ವಿತರಣೆ ನಡೆಯಲಿದೆ.ಆದ್ದರಿಂದ ಈ ಕಾರ್ಯಕ್ರಮವನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ಸುನ್ನಿ ಸೆಂಟರ್ ಅಧ್ಯಕ್ಷರಾದ ಹಾಜಿ ಅಬ್ದುಲ್ ಹಮೀದ್ ಕೊಡಂಗಾಯಿ ತಿಳಿಸಿದ್ದಾರೆ.

______________________________
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ