ಉಪ್ಪಿನಂಗಡಿ: ಪ್ರಮುಖ ವಿದ್ವಾಂಸರು, ಸುನ್ನೀ ಸಂಘಟನೆಗಳ ಸಕ್ರೀಯ ನಾಯಕತ್ವ ಸಯ್ಯಿದ್ ಕರ್ವೇಲ್ ಸಾದತ್ ತಂಙಳ್ ಇಂದು ಬೆಳಿಗ್ಗೆ ವಫಾತಾದರು.
ಚಿರಯುವಕರಂತೆ ಸುನ್ನತ್ ಜಮಾಅತಿಗಾಗಿ ಹಗಳಿರುಳು ದುಡಿಯುತ್ತಿದ್ದ ಪ್ರವಾದಿ ಕುಟುಂಬದ ಕರುಳ ಕುಡಿ ಸುನ್ನೀ ಜನ ಸಮೂಹಕ್ಕೆ ಮಾರ್ಗದರ್ಶಿಯಾಗಿದ್ದ ಸಯ್ಯಿದರು, ಕಳೆದ ಒಂದು ವಾರದ ಹಿಂದೆ ನಡೆದ ರಿಕ್ಷಾ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಮುಂಜಾನೆ ಹೊತ್ತು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾಗಿ ಸಯ್ಯಿದರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ನಿನ್ನೆ ತಾನೇ ತಂಙಳರ ಸಹೋದರಿಯ ಮಗಳು ಹೃದಯಾಘಾತದಿಂದ ನಿಧನ ಹೊಂದಿದ್ದು ಇದರ ಬೆನ್ನಲ್ಲೇ ತಂಙಳರ ಮರಣ ಸಂಭವಿಸಿದೆ. ಸಯ್ಯಿದರ ಕುಟುಂಬಸ್ಥರು ಮತ್ತು ಸುನ್ನೀ ಸಮೂಹವನ್ನು ದುಃಖದ ಕಣ್ಣೀರಿನಲ್ಲಿ ಮುಳುಗುಸಿದೆ.
ಅವರ ಕುಟುಂಬಕ್ಕೆ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಅಲ್ಲಾಹು ನೀಡಲಿ. ಎಲ್ಲಾ ಉಲಮಾ,ಉಮರಾ, ನಾಯಕರು ,ಕಾರ್ಯಕರ್ತರು ತಂಙಳರ ಮೇಲೆ ಕುರುಆನ್ ಓದಿ, ತಹ್ಲೀಲ್ ಹೇಳಿ ದುಆ ಮಾಡಬೇಕಾಗಿ ಸುನ್ನೀ ಸಂಘ ಸಂಸ್ಥೆಗಳು ವಿನಂತಿಸಿವೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್