ಮಂಗಳೂರು: ಕೃಷ್ಣಾಪುರ ಕ್ರಾಸ್ ಮತ್ತು ಚೊಕ್ಕಬೆಟ್ಟು ಮಧ್ಯಭಾಗದಲ್ಲಿರುವ ಕೆಲವು ಮನೆಗಳಿಂದ ಎಂ.ಆರ್.ಪಿ.ಎಲ್ ಕಾರ್ಖಾನೆಗೆ ನೀರನ್ನು ಮಧ್ಯರಾತ್ರಿಯಲ್ಲಿ ಸರಬರಾಜು ಮಾಡುತ್ತಿರುವ ಜಲ ಮಾಫಿಯಾ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ನಾಗರಿಕರಿಗೆ ಸಮೀಪದಲ್ಲಿನ ಕೊಳವೆ ಬಾವಿಯಿಂದ ಪ್ರತೀ ಮನೆಗಳಿಗೆ ಕುಡಿಯುವ ನೀರನ್ನು ವಿತರಿಸುತ್ತಿದ್ದು, ಸದ್ರಿ ಮೇಲೆ ತಿಳಿಸಲಾದ ಕೆಲವು ಮನೆಗಳು ಕಾರ್ಖಾನೆಗೆ ತಮ್ಮ ಬಾವಿಯ ನೀರನ್ನು ಸರಬರಾಜು ಮಾಡುತ್ತಿರುವ ಕಾರಣ ಪರಿಸರದ ನೀರು ಬರಿದಾಗುತ್ತಿದ್ದು ಸ್ಥಳೀಯ ನಿವಾಸಿಗಳಿಗೆ. ಜನಸಾಮಾನ್ಯರಿಗೆ ಕುಡಿಯುವ ನೀರಿನ ಅಭಾವವಾಗಿ ಬಹಳ ತೊಂದರೆ ಉಂಟಾಗಿದೆ.
ಇದಕ್ಕೆ ಪರಿಹಾರ ಒದಗಿಸುವಂತೆ ಸಾರ್ವಜನಿಕರು ಮಾನ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿದ್ದಾರೆ.



“ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೃಷ್ಣಾಪುರ ಭಾಗದಲ್ಲಿ ಕುಡಿಯುವ ನೀರಿನ ಅಭಾವದಿಂದ ಸ್ಥಳೀಯ ನಾಗರಿಕರು ಬಳಲುತ್ತಿರುವ ಈ ಸಂದರ್ಭದಲ್ಲಿ ಕೃಷ್ಣಾಪುರ ಕ್ರಾಸ್ ಮತ್ತು ಚೊಕ್ಕಬೆಟ್ಟು ಮಧ್ಯಭಾಗದಲ್ಲಿರುವ ಕೆಲವು ಮನೆಗಳವರು ತಮ್ಮ ಬಾವಿಯಿಂದ ಎಂ.ಆರ್.ಪಿ.ಎಲ್ ಕಾರ್ಖಾನೆಗೆ ನೀರನ್ನು ಮಧ್ಯರಾತ್ರಿಯಲ್ಲಿ ಸರಬರಾಜು (ವಿಕ್ರಯಿಸುತ್ತಿರುವುದು) ಮಾಡಲಾಗುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಆದುದರಿಂದ ಗೌರವಾನ್ವಿತ ಅಧಿಕಾರಿಗಳು ತಕ್ಷಣವೇ ವಿಷಯದ ಕೂಲಂಕುಷ ಅಧ್ಯಯನ ನಡೆಸಿ, ನಮ್ಮ ಸಮಸ್ಯೆಯನ್ನು ಬಗೆಹರಿಸುವಲ್ಲಿ ಎಂ.ಆರ್.ಪಿ.ಎಲ್ ಕಾರ್ಖಾನೆಗೆ ನೀರು ಸರಬರಾಜು ಮಾಡುತ್ತಿರುವುದನ್ನು ಶಾಶ್ವತ ತಡೆಹಿಡಿದು ಪರಿಸರದವರಿಗೆ ನ್ಯಾಯ ಒದಗಿಸಿಕೊಡಬೇಕಾಗಿ ಈ ಮೂಲಕ ವಿನಂತಿಸುತ್ತೇವೆ”
















ಇನ್ನಷ್ಟು ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ