ಮಂಗಳೂರು: ಕರ್ನಾಟಕ ರಾಜ್ಯ ಮತ್ತು ಇತರೆಡೆಗಳಲ್ಲಿ ವಾಸಿಸುತ್ತಿರುವ 25 ಲಕ್ಷ ಜನಸಂಖ್ಯೆಗೂ ಮಿಕ್ಕಿದ ಬ್ಯಾರಿ ಜನಾಂಗವು ಅನಾದಿಕಾಲದಿಂದ ವ್ಯತಸ್ಥ ಜೀವನ ಕ್ರಮದಿಂದ ತನ್ನನ್ನು ಗುರುತಿಸಿಕೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಅಗಾಧವಾಗಿ ಮತ್ತು ಇತರೆಡೆಗಳಲ್ಲಿ ವಿರಳವಾಗಿ ಸಾಮಾಜಿಕ ಬದುಕು ಸಾಗಿಸುತ್ತಿದ್ದು, ಈ ಜನಾಂಗದ ಸಮಗ್ರ ಅಭಿವೃದ್ಧಿಗೆ ಸರಕಾರ ಕರ್ನಾಟಕ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಿರುತ್ತರೆ.

ಬ್ಯಾರಿ ಸಮುದಾಯವು ದ್ರಾವಿಡ ಜನಾಂಗದ ಮೂಲದಿಂದ ಉದ್ಭವವಾಗಿದ್ದು, ಜನರ ಆಡುಭಾಷೆ ತಮಿಳು ಭಾಷೆಯನ್ನೇ ಹೋಲುತ್ತಿದ್ದು, ಬ್ಯಾರಿ ಮೂಲನಿವಾಸಿ ಜನಾಂಗವಾಗಿರುತ್ತದೆ. ಹಾಲಿ ಬ್ಯಾರಿ ಜನಾಂಗವು ತನ್ನನ್ನು ಸಾಮಾಜಿಕವಾಗಿ ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವುದರೊಂದಿಗೆ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಕೊಡುಗೆಯ ಹೊರತಾಗಿಯೂ, ಸಾಮಾಜಿಕ ಹಿನ್ನಡೆ ಇರುವುದರ ಕಾರಣಕ್ಕಾಗಿ ಸರಕಾರದ ನೇರ ಸವಲತ್ತನ್ನು ಅಪೇಕ್ಷಿಸಲಾಗುತ್ತಿದೆ.
ಸರಕಾರವು ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ವಾರ್ಷಿಕ ರೂಪಾಯಿ 200 ಕೋಟಿಗೆ ಕಡಿಮೆ ಇರದಂತೆ ಸರಕಾರದ ಬಜೆಟ್ನಲ್ಲಿ ಹಣ ಮೀಸಲು ಇಡಬೇಕೆಂದು ಒತ್ತಾಯಿಸುವುದರೊಂದಿಗೆ, ಸರಕಾರ ಬ್ಯಾರಿ ಜನಾಂಗದ ಅಭಿವೃದ್ಧಿಗೆ ಸಹಕರಿಸಬೇಕೆಂದು ಅಪೇಕ್ಷಿಸುತ್ತದೆ.
ಈ ನಿಟ್ಟಿನಲ್ಲಿ ಅಖಿಲ ಭಾರತ ಬ್ಯಾರಿ ಮಹಾಸಭಾ ಸಂಸ್ಥೆಯ ನಿಯೋಗವು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಮಾನ್ಯ ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ನಿಗಮ ಸ್ಥಾಪನೆಗೆ ಬೇಡಿಕೆಯ ಮನವಿ ಸಲ್ಲಿಸಿರುತ್ತದೆ.
ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿರುತ್ತಾರೆ.
ರಾಜ್ಯ ಸರಕಾರ ಈಗಾಗಲೇ ವಿವಿಧ ಸಮುದಾಯದ ಅಭಿವೃದ್ಧಿಗೆ ನಿಗಮ ರಚನೆ ಮಾಡಿದಂತೆ ಬ್ಯಾರಿ ಜನಾಂಗದ ಅಭಿವೃದ್ಧಿಗೆ ಕೂಡಾ ನಿಗಮ ರಚನೆ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕಾರ್ಯವೆಸಗುತ್ತದೆ ಎಂಬ ಬಗ್ಗೆ ನಮಗೆ ಭರವಸೆ ಇದೆ.
ಸರಕಾರ ಹಾಲಿ ಬ್ಯಾರಿ ಜನಾಂಗವನ್ನು ಮತೀಯ ಅಲ್ಪಸಂಖ್ಯಾತರೊಂದಿಗೆ ಸೇರಿಸಲ್ಪಟ್ಟಿದ್ದು, ಇತರ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರೈಸ್ತ, ಜೈನ, ಬುದ್ಧ, ಪಾರ್ಸಿ, ಸಿಖ್ಗಳೊಂದಿಗೆ ಮೀಸಲಿಡುವ ನಿಧಿ ಬ್ಯಾರಿ ಜನಾಂಗಕ್ಕೆ ಸಮರ್ಪಕವಾಗಿ ಪ್ರಯೋಜನವಾಗುತ್ತಿಲ್ಲ ಎಂಬುದು ಸತ್ಯ. ಆದುದರಿಂದ ಸುಮಾರು 25 ಲಕ್ಷದಷ್ಟು ಬ್ಯಾರಿ ಜನಾಂಗದ ಅಭಿವೃದ್ಧಿಗೆ ಪ್ರತ್ಯೇಕ ನಿಗಮದ ಅತೀ ಅಗತ್ಯ ಇದೆ.
ಸರಕಾರ ಈಗಾಗಲೇ ಹಲವಾರು ವರ್ಷದ ಹಿಂದೆ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿದ್ದು, ಬ್ಯಾರಿ ಜನಾಂಗದ ಪ್ರತ್ಯೇಕ ಗುರುತಿಸುವಿಕೆಗೆ ಸಾಕ್ಷಿಯಾಗಿದೆ. ಬ್ಯಾರಿ ಜನಾಂಗದಲ್ಲಿ ಕೂಡಾ ಇತರೆ ಸಮುದಾಯಗಳಂತೆ ಶಿಕ್ಷಣ, ಉದ್ಯೋಗ, ಆಶ್ರಯ ವಂಚಿತ ಅಗಾಧ ಪ್ರಮಾಣದ ಜನಸಂಖ್ಯೆ ಇದ್ದು, ಬ್ಯಾರಿ ನಿಗಮ ಸ್ಥಾಪನೆಯಾದರೆ ಈ ಜನಾಂಗಕ್ಕೆ ತುಂಬಾ ಪ್ರಯೋಜನವಾಗಲಿದೆ.
ಸರಕಾರ ಈಗಾಗಲೇ ಕ್ರೈಸ್ತ ,ವಿಶ್ವಕರ್ಮ, ಲಿಂಗಾಯತ ಮರಾಠಿ, ಕೊಡವ ನಿಗಮಗಳನ್ನು ರಚಿಸಿದಂತೆ ಬ್ಯಾರಿ ನಿಗಮವನ್ನು ಸ್ಥಾಪಿಸಲು ಒತ್ತಾಯಿಸುತ್ತೇವೆ.
ಬ್ಯಾರಿ ಜನಾಂಗದ ಹಿರಿಯ ಮುಖಂಡರು ಬ್ಯಾರಿ ನಿಗಮ ಸ್ಥಾಪನೆಯ ಬೇಡಿಕೆ ಮತ್ತು ಪ್ರಸ್ತಾವನೆಗೆ ಸಹಮತ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಅಖಿಲ ಭಾರತ ಮಟ್ಟದ ಬ್ಯಾರಿ ಸಮಾವೇಶದ ಯೋಜನೆಯನ್ನು ರೂಪಿಸಲಾಗುವುದು ಎಂದು ಅಖಿಲ ಭಾರತ ಬ್ಯಾರಿ ಮಹಾಸಭಾದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂಚಾಲಕರಾದ ಮುಹಮ್ಮದ್ ಶಾಕಿರ್ ಹಾಜಿ,ರಅಬ್ದುಲ್ ಜಲೀಲ್ (ಅದ್ದು) ಕೃಷ್ಣಾಪುರ, ಕಾರ್ಯದರ್ಶಿ ಮುಹಮ್ಮದ್ ಹನೀಫ್ ಯು, ಅಶ್ರಫ್ ಬದ್ರಿಯಾ,ಇ.ಕೆ. ಹುಸೈನ್ ,ಬಾವಾ ಪದರಂಗಿ, ಹಮೀದ್ ಕಿನ್ಯಾ,ಮೊಹಮ್ಮದ್ ಸಾಲಿಹ್ ಬಜ್ಪೆ, ಅಬ್ದುಲ್ ಲತೀಫ್ ಬ್ಲೂಸ್ಟಾರ್ ಮತ್ತು ಅಬ್ದುಲ್ ಖಾದರ್ ಇಡ್ಮಾ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್