ಮಂಗಳೂರು: ಕರ್ನಾಟಕ ರಾಜ್ಯ ಮತ್ತು ಇತರೆಡೆಗಳಲ್ಲಿ ವಾಸಿಸುತ್ತಿರುವ 25 ಲಕ್ಷ ಜನಸಂಖ್ಯೆಗೂ ಮಿಕ್ಕಿದ ಬ್ಯಾರಿ ಜನಾಂಗವು ಅನಾದಿಕಾಲದಿಂದ ವ್ಯತಸ್ಥ ಜೀವನ ಕ್ರಮದಿಂದ ತನ್ನನ್ನು ಗುರುತಿಸಿಕೊಂಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಅಗಾಧವಾಗಿ ಮತ್ತು ಇತರೆಡೆಗಳಲ್ಲಿ ವಿರಳವಾಗಿ ಸಾಮಾಜಿಕ ಬದುಕು ಸಾಗಿಸುತ್ತಿದ್ದು, ಈ ಜನಾಂಗದ ಸಮಗ್ರ ಅಭಿವೃದ್ಧಿಗೆ ಸರಕಾರ ಕರ್ನಾಟಕ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಆಗ್ರಹಿಸಿರುತ್ತರೆ.

ಬ್ಯಾರಿ ಸಮುದಾಯವು ದ್ರಾವಿಡ ಜನಾಂಗದ ಮೂಲದಿಂದ ಉದ್ಭವವಾಗಿದ್ದು, ಜನರ ಆಡುಭಾಷೆ ತಮಿಳು ಭಾಷೆಯನ್ನೇ ಹೋಲುತ್ತಿದ್ದು, ಬ್ಯಾರಿ ಮೂಲನಿವಾಸಿ ಜನಾಂಗವಾಗಿರುತ್ತದೆ. ಹಾಲಿ ಬ್ಯಾರಿ ಜನಾಂಗವು ತನ್ನನ್ನು ಸಾಮಾಜಿಕವಾಗಿ ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವುದರೊಂದಿಗೆ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಕೊಡುಗೆಯ ಹೊರತಾಗಿಯೂ, ಸಾಮಾಜಿಕ ಹಿನ್ನಡೆ ಇರುವುದರ ಕಾರಣಕ್ಕಾಗಿ ಸರಕಾರದ ನೇರ ಸವಲತ್ತನ್ನು ಅಪೇಕ್ಷಿಸಲಾಗುತ್ತಿದೆ.
ಸರಕಾರವು ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ವಾರ್ಷಿಕ ರೂಪಾಯಿ 200 ಕೋಟಿಗೆ ಕಡಿಮೆ ಇರದಂತೆ ಸರಕಾರದ ಬಜೆಟ್ನಲ್ಲಿ ಹಣ ಮೀಸಲು ಇಡಬೇಕೆಂದು ಒತ್ತಾಯಿಸುವುದರೊಂದಿಗೆ, ಸರಕಾರ ಬ್ಯಾರಿ ಜನಾಂಗದ ಅಭಿವೃದ್ಧಿಗೆ ಸಹಕರಿಸಬೇಕೆಂದು ಅಪೇಕ್ಷಿಸುತ್ತದೆ.
ಈ ನಿಟ್ಟಿನಲ್ಲಿ ಅಖಿಲ ಭಾರತ ಬ್ಯಾರಿ ಮಹಾಸಭಾ ಸಂಸ್ಥೆಯ ನಿಯೋಗವು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಮಾನ್ಯ ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ನಿಗಮ ಸ್ಥಾಪನೆಗೆ ಬೇಡಿಕೆಯ ಮನವಿ ಸಲ್ಲಿಸಿರುತ್ತದೆ.
ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿರುತ್ತಾರೆ.
ರಾಜ್ಯ ಸರಕಾರ ಈಗಾಗಲೇ ವಿವಿಧ ಸಮುದಾಯದ ಅಭಿವೃದ್ಧಿಗೆ ನಿಗಮ ರಚನೆ ಮಾಡಿದಂತೆ ಬ್ಯಾರಿ ಜನಾಂಗದ ಅಭಿವೃದ್ಧಿಗೆ ಕೂಡಾ ನಿಗಮ ರಚನೆ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕಾರ್ಯವೆಸಗುತ್ತದೆ ಎಂಬ ಬಗ್ಗೆ ನಮಗೆ ಭರವಸೆ ಇದೆ.
ಸರಕಾರ ಹಾಲಿ ಬ್ಯಾರಿ ಜನಾಂಗವನ್ನು ಮತೀಯ ಅಲ್ಪಸಂಖ್ಯಾತರೊಂದಿಗೆ ಸೇರಿಸಲ್ಪಟ್ಟಿದ್ದು, ಇತರ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ, ಕ್ರೈಸ್ತ, ಜೈನ, ಬುದ್ಧ, ಪಾರ್ಸಿ, ಸಿಖ್ಗಳೊಂದಿಗೆ ಮೀಸಲಿಡುವ ನಿಧಿ ಬ್ಯಾರಿ ಜನಾಂಗಕ್ಕೆ ಸಮರ್ಪಕವಾಗಿ ಪ್ರಯೋಜನವಾಗುತ್ತಿಲ್ಲ ಎಂಬುದು ಸತ್ಯ. ಆದುದರಿಂದ ಸುಮಾರು 25 ಲಕ್ಷದಷ್ಟು ಬ್ಯಾರಿ ಜನಾಂಗದ ಅಭಿವೃದ್ಧಿಗೆ ಪ್ರತ್ಯೇಕ ನಿಗಮದ ಅತೀ ಅಗತ್ಯ ಇದೆ.
ಸರಕಾರ ಈಗಾಗಲೇ ಹಲವಾರು ವರ್ಷದ ಹಿಂದೆ ಬ್ಯಾರಿ ಅಕಾಡೆಮಿಯನ್ನು ಸ್ಥಾಪಿಸಿದ್ದು, ಬ್ಯಾರಿ ಜನಾಂಗದ ಪ್ರತ್ಯೇಕ ಗುರುತಿಸುವಿಕೆಗೆ ಸಾಕ್ಷಿಯಾಗಿದೆ. ಬ್ಯಾರಿ ಜನಾಂಗದಲ್ಲಿ ಕೂಡಾ ಇತರೆ ಸಮುದಾಯಗಳಂತೆ ಶಿಕ್ಷಣ, ಉದ್ಯೋಗ, ಆಶ್ರಯ ವಂಚಿತ ಅಗಾಧ ಪ್ರಮಾಣದ ಜನಸಂಖ್ಯೆ ಇದ್ದು, ಬ್ಯಾರಿ ನಿಗಮ ಸ್ಥಾಪನೆಯಾದರೆ ಈ ಜನಾಂಗಕ್ಕೆ ತುಂಬಾ ಪ್ರಯೋಜನವಾಗಲಿದೆ.
ಸರಕಾರ ಈಗಾಗಲೇ ಕ್ರೈಸ್ತ ,ವಿಶ್ವಕರ್ಮ, ಲಿಂಗಾಯತ ಮರಾಠಿ, ಕೊಡವ ನಿಗಮಗಳನ್ನು ರಚಿಸಿದಂತೆ ಬ್ಯಾರಿ ನಿಗಮವನ್ನು ಸ್ಥಾಪಿಸಲು ಒತ್ತಾಯಿಸುತ್ತೇವೆ.
ಬ್ಯಾರಿ ಜನಾಂಗದ ಹಿರಿಯ ಮುಖಂಡರು ಬ್ಯಾರಿ ನಿಗಮ ಸ್ಥಾಪನೆಯ ಬೇಡಿಕೆ ಮತ್ತು ಪ್ರಸ್ತಾವನೆಗೆ ಸಹಮತ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಅಖಿಲ ಭಾರತ ಮಟ್ಟದ ಬ್ಯಾರಿ ಸಮಾವೇಶದ ಯೋಜನೆಯನ್ನು ರೂಪಿಸಲಾಗುವುದು ಎಂದು ಅಖಿಲ ಭಾರತ ಬ್ಯಾರಿ ಮಹಾಸಭಾದ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಸಂಚಾಲಕರಾದ ಮುಹಮ್ಮದ್ ಶಾಕಿರ್ ಹಾಜಿ,ರಅಬ್ದುಲ್ ಜಲೀಲ್ (ಅದ್ದು) ಕೃಷ್ಣಾಪುರ, ಕಾರ್ಯದರ್ಶಿ ಮುಹಮ್ಮದ್ ಹನೀಫ್ ಯು, ಅಶ್ರಫ್ ಬದ್ರಿಯಾ,ಇ.ಕೆ. ಹುಸೈನ್ ,ಬಾವಾ ಪದರಂಗಿ, ಹಮೀದ್ ಕಿನ್ಯಾ,ಮೊಹಮ್ಮದ್ ಸಾಲಿಹ್ ಬಜ್ಪೆ, ಅಬ್ದುಲ್ ಲತೀಫ್ ಬ್ಲೂಸ್ಟಾರ್ ಮತ್ತು ಅಬ್ದುಲ್ ಖಾದರ್ ಇಡ್ಮಾ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್