ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಕರ್ನಾಟಕ (ರಿ) ಸಂಸ್ಥೆಯ ಹೊಸ ಯೋಜನೆಯಾದ ಗಂಡು ಮಕ್ಕಳ ದಅವಾ ಕಾಲೇಜು ಮತ್ತು ಬಾಯ್ಸ್ ಇಸ್ಲಾಮಿಕ್ ಸ್ಕೂಲ್ ಅನ್ನು ಪುತ್ತೂರು ತಾಲೂಕಿನ ಬುಳ್ಳೇರಿಕಟ್ಟೆ ಮಂಜ ಎಂಬಲ್ಲಿ ಪ್ರಸಿದ್ಧ ದರ್ಗಾದ ಸಮೀಪವಿರುವ ಅನ್ಸಾರಿಯ ಜುಮಾ ಮಸ್ಜಿದ್ ನಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿದೆ.
ಬೆಳ್ಳಿಹಬ್ಬ ‘ಸಿಲ್ವರಿಯಮ್’ ಪ್ರಯುಕ್ತ ಹಮ್ಮಿ ಕೊಳ್ಳಲಾದ ಇಪ್ಪತ್ತೈದು ಅಂಶ ಕಾರ್ಯಕ್ರಮಗಳಲ್ಲಿ ದಾವಾ ಕಾಲೇಜು ಪ್ರಮುಖವಾಗಿದೆ.
ಈ ಕಳೆದ ಇಪ್ಪತ್ತ ಮೂರು ವರ್ಷಗಳಲ್ಲಿ ಮಹಿಳಾ ಶಿಕ್ಷಣಕ್ಕೆ ಒತ್ತು ಕೊಟ್ಟು ಕಾರ್ಯಾಚರಿಸಿದ ಕುಂಬ್ರ ಮರ್ಕಝ್, ಈ ಮೂಲಕ
ಗಂಡು ಮಕ್ಕಳ ವಿದ್ಯಾಭ್ಯಾಸ ಕ್ಷೇತ್ರಕ್ಕೂ ಕಾಲಿಟ್ಟಿದೆ.
‘ಮರ್ಕಝ್ ಅಕಾಡೆಮಿ ಆಫ್ ಥಿಯೋಲಜಿ’ ಎಂಬ
ಈ ಸಂಸ್ಥೆಯಲ್ಲಿ, ಶಾಲೆಯಲ್ಲಿ ಎಂಟು, ಒಂಬತ್ತು ಮತ್ತು ಪ್ರಥಮ ಪಿಯುಸಿ ತರಗತಿಗಳಿಗೆ ಪ್ರವೇಶ ನೀಡಲಾಗುವುದು.

ಪ್ರಸಿದ್ಧ ವಿದ್ವಾಂಸರಾಗಿದ್ದ ಮರ್ಹೂಮ್ ಪಿಎಂಕೆ ಮದನಿ ಪರ್ಲಡ್ಕ ದಶಕಗಳ ಹಿಂದೆ ಸ್ಥಾಪಿಸಿದ ಸದರಿ ಮಸೀದಿಯಲ್ಲಿ ಈ ಹಿಂದೆ ಹಲವು ಪ್ರಮುಖ ಅಲಿಂಗಳು ದರ್ಸಿಗೆ ನೇತೃತ್ವ ವಹಿಸಿದ್ದರು.
ಏಪ್ರಿಲ್ ಇಪ್ಪತ್ತಾರು ಶುಕ್ರವಾರ ನೂತನ ದಾವಾ ಕಾಲೇಜಿನ ಉದ್ಘಾಟನೆ ನಡೆಯಲಿದ್ದು ಪ್ರಾಂಶುಪಾಲರಾಗಿ ಡಾ. ಎಮ್ಮೆಸ್ಸೆಂ ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್ ಕಾರ್ಯ ನಿರ್ವಹಿಸಲಿದ್ದಾರೆ. ಇದು ಮರ್ಕಝುಲ್ ಹುದಾ ಕರ್ನಾಟಕ (ರಿ) ಸಂಸ್ಥೆಯ ಅಧೀನದಲ್ಲಿ ಕಾರ್ಯಾಚರಿಸಲಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್