ಪುತ್ತೂರು ಕುಂಬ್ರ ಮರ್ಕಝುಲ್ ಹುದಾ ಕರ್ನಾಟಕ (ರಿ) ಸಂಸ್ಥೆಯ ಹೊಸ ಯೋಜನೆಯಾದ ಗಂಡು ಮಕ್ಕಳ ದಅವಾ ಕಾಲೇಜು ಮತ್ತು ಬಾಯ್ಸ್ ಇಸ್ಲಾಮಿಕ್ ಸ್ಕೂಲ್ ಅನ್ನು ಪುತ್ತೂರು ತಾಲೂಕಿನ ಬುಳ್ಳೇರಿಕಟ್ಟೆ ಮಂಜ ಎಂಬಲ್ಲಿ ಪ್ರಸಿದ್ಧ ದರ್ಗಾದ ಸಮೀಪವಿರುವ ಅನ್ಸಾರಿಯ ಜುಮಾ ಮಸ್ಜಿದ್ ನಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿದೆ.
ಬೆಳ್ಳಿಹಬ್ಬ ‘ಸಿಲ್ವರಿಯಮ್’ ಪ್ರಯುಕ್ತ ಹಮ್ಮಿ ಕೊಳ್ಳಲಾದ ಇಪ್ಪತ್ತೈದು ಅಂಶ ಕಾರ್ಯಕ್ರಮಗಳಲ್ಲಿ ದಾವಾ ಕಾಲೇಜು ಪ್ರಮುಖವಾಗಿದೆ.
ಈ ಕಳೆದ ಇಪ್ಪತ್ತ ಮೂರು ವರ್ಷಗಳಲ್ಲಿ ಮಹಿಳಾ ಶಿಕ್ಷಣಕ್ಕೆ ಒತ್ತು ಕೊಟ್ಟು ಕಾರ್ಯಾಚರಿಸಿದ ಕುಂಬ್ರ ಮರ್ಕಝ್, ಈ ಮೂಲಕ
ಗಂಡು ಮಕ್ಕಳ ವಿದ್ಯಾಭ್ಯಾಸ ಕ್ಷೇತ್ರಕ್ಕೂ ಕಾಲಿಟ್ಟಿದೆ.
‘ಮರ್ಕಝ್ ಅಕಾಡೆಮಿ ಆಫ್ ಥಿಯೋಲಜಿ’ ಎಂಬ
ಈ ಸಂಸ್ಥೆಯಲ್ಲಿ, ಶಾಲೆಯಲ್ಲಿ ಎಂಟು, ಒಂಬತ್ತು ಮತ್ತು ಪ್ರಥಮ ಪಿಯುಸಿ ತರಗತಿಗಳಿಗೆ ಪ್ರವೇಶ ನೀಡಲಾಗುವುದು.

ಪ್ರಸಿದ್ಧ ವಿದ್ವಾಂಸರಾಗಿದ್ದ ಮರ್ಹೂಮ್ ಪಿಎಂಕೆ ಮದನಿ ಪರ್ಲಡ್ಕ ದಶಕಗಳ ಹಿಂದೆ ಸ್ಥಾಪಿಸಿದ ಸದರಿ ಮಸೀದಿಯಲ್ಲಿ ಈ ಹಿಂದೆ ಹಲವು ಪ್ರಮುಖ ಅಲಿಂಗಳು ದರ್ಸಿಗೆ ನೇತೃತ್ವ ವಹಿಸಿದ್ದರು.
ಏಪ್ರಿಲ್ ಇಪ್ಪತ್ತಾರು ಶುಕ್ರವಾರ ನೂತನ ದಾವಾ ಕಾಲೇಜಿನ ಉದ್ಘಾಟನೆ ನಡೆಯಲಿದ್ದು ಪ್ರಾಂಶುಪಾಲರಾಗಿ ಡಾ. ಎಮ್ಮೆಸ್ಸೆಂ ಅಬ್ದುಲ್ ರಶೀದ್ ಸಖಾಫಿ ಝೈನಿ ಕಾಮಿಲ್ ಕಾರ್ಯ ನಿರ್ವಹಿಸಲಿದ್ದಾರೆ. ಇದು ಮರ್ಕಝುಲ್ ಹುದಾ ಕರ್ನಾಟಕ (ರಿ) ಸಂಸ್ಥೆಯ ಅಧೀನದಲ್ಲಿ ಕಾರ್ಯಾಚರಿಸಲಿದೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್