ನವದೆಹಲಿ: ಎಲ್ಲಾ ಟೀಕೆಗಳು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಎಲ್ಲಾ ಟೀಕೆಗಳನ್ನು ಅಪರಾಧ ಎಂದು ಪರಿಗಣಿಸಿದರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370 ರದ್ದತಿಯನ್ನು ಟೀಕಿಸಿದ ಕಾಲೇಜು ಪ್ರಾಧ್ಯಾಪಕರ ಪ್ರಕರಣವನ್ನು ರದ್ದುಗೊಳಿಸುತ್ತಾ ಸುಪ್ರೀಂ ಕೋರ್ಟ್ ಈ ನಿರ್ಣಾಯಕ ಅವಲೋಕನ ನಡೆಸಿದೆ.
ಭಾರತದ ಸಂವಿಧಾನದ 19(1)a ಪರಿಚ್ಛೇದವು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನಾಗರಿಕರಿಗೆ ಒದಗಿಸುತ್ತದೆ. 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಟೀಕಿಸಲು ನಾಗರಿಕರಿಗೆ ಈ ಸ್ವಾತಂತ್ರ್ಯವನ್ನು ಬಳಸಲು ಹಕ್ಕಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ತಮಗೆ ಆಸಕ್ತಿಯಿಲ್ಲದ ಸರ್ಕಾರದ ಯಾವುದೇ ನಿರ್ಧಾರವನ್ನು ಟೀಕಿಸುವ ಹಕ್ಕು ನಾಗರಿಕರಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
“ನಮ್ಮ ಪೊಲೀಸ್ ವ್ಯವಸ್ಥೆಗೆ ಈ ಬಗ್ಗೆ ತಿಳಿವಳಿಕೆ ಮೂಡಿಸುವ ಸಮಯವಾಗಿದೆ.ಅವರು ಆರ್ಟಿಕಲ್ 19 (ಎ) ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ಅವರು ಸಂವೇದನಾಶೀಲರಾಗಬೇಕು” ಎಂದು ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಹೇಳಿದೆ.
ಮಹಾರಾಷ್ಟ್ರದ ಕೊಲ್ಹಾಪುರ ಕಾಲೇಜಿನಲ್ಲಿ ಉದ್ಯೋಗದಲ್ಲಿರುವ ಜಾವೇದ್ ಅಹಮದ್ ಹಜಾಮ್ ವಿರುದ್ಧ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಾಶ್ಮೀರದ ಇತಿಹಾಸದಲ್ಲಿ ಆಗಸ್ಟ್ ‘5’ ಕರಾಳ ದಿನ ಎಂಬ ಹೇಳಿಕೆ ಹಾಗೂ ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿತ್ತು. ಆಗಸ್ಟ್ 5 ಕರಾಳ ದಿನ ಎಂದು ಹೇಳುವ ಮೂಲಕ ಪ್ರಾಧ್ಯಾಪಕರು ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ ಮತ್ತು ಪಾಕಿಸ್ತಾನಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಕರಣವನ್ನು ರದ್ದುಗೊಳಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ